
ಉಡುಪಿ : ಮೋದಿ ಆಗಮಿಸುವ ಮೈಸೂರು ಕಾರ್ಯಕ್ರಮಕ್ಕೆ ಸಿಎಂಗೆ ಆಹ್ವಾನ ನೀಡದ ಸಂಬಂಧ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಉಡುಪಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ಶಿಷ್ಟಾಚಾರ ಪಾಲಿಸುವುದು ಕೇಂದ್ರದ ಜವಾಬ್ದಾರಿ. ಆಹ್ವಾನ ನೀಡದಿರುವುದು ಪ್ರಧಾನಿ ಮೋದಿ ಅವರ ಸಣ್ಣತನವನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ.
ಇನ್ನು ಅಮಿತ್ ಶಾ ಮೂರ್ನಾಲ್ಕು ಬಾರಿ ರಾಜ್ಯಕ್ಕೆ ಬಂದಿದ್ದಾರೆ. ಆದರೆ ಮತ್ತೆ ರಾಜ್ಯಕ್ಕೆ ಬಂದಾಗಲಾದರೂ ಕೂಡ ಅವರು ಸತ್ಯವನ್ನು ಮಾತನಾಡಲಿ. ಶಾ ಕೋಮು ಭಾವನೆ ಕೆಡಿಸದಿರಲಿ ಎಂದು ಹೇಳಿದ್ದಾರೆ.
ಅಲ್ಲದೇ ಜನರ ಮನಸ್ಸಿನಲ್ಲಿ ವಿಷ ಬೀಜ ಬಿತ್ತವೇಡಿ. ನಮ್ಮ ಸರ್ಕಾರದ ಬಗ್ಗೆ ಸುಳ್ಳು ಆರೋಪ ಮಾಡುವುದನ್ನು ಬಿಡಲಿ. ಅಮಿತ್ ಶಾ ಅವರು ಜವಾಬ್ದಾರಿಯುತವಾಗಿ ಮಾತನಾಡಲಿ. ಹೆದರಿಸಿ – ಬೆದರಿಸುವ ರಾಜಕಾರಣ ನಮ್ಮ ರಾಜ್ಯಕ್ಕೆ ಬೇಡ ಎಂದು ಹೇಳಿದ್ದಾರೆ.
ಇನ್ನು ದೇವಸ್ಥಾನಕ್ಕೆ ಹೋಗಲು ಯಾರ ಅನುಮತಿಯೂ ಕೂಡ ಬೇಕಾಗಿಲ್ಲ. ದೇವಸ್ಥಾನ, ಮಸೀದಿಯನ್ನು ಬಿಜೆಪಿಯವರಿಗೆ ಗುತ್ತಿಗೆ ಕೊಟ್ಟಿಲ್ಲ. ಹಿಂದೆಯೂ ಕಾಂಗ್ರೆಸ್ ನಾಯಕರು ದೇವಸ್ಥಾನಕ್ಕೆ ಭೇಟಿ ನೀಡದಿರಲಿ. ಇನ್ನು ಕರಾವಳಿ ಪ್ರವಾಸ ಮಾಡಲಿರುವ ಅಮಿತ್ ಶಾ ಅಲ್ಲಿನ ಮಸೀದಿಗಳಿಗೂ ಕೂಡ ಭೇಟಿ ನೀಡಲಿ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.