ಬಿಜೆಪಿಯವರೀಗ ಮೌನ ವಹಿಸಿದ್ದು ಏಕೆ..?

Published : Aug 21, 2018, 09:41 AM ISTUpdated : Sep 09, 2018, 08:38 PM IST
ಬಿಜೆಪಿಯವರೀಗ ಮೌನ ವಹಿಸಿದ್ದು ಏಕೆ..?

ಸಾರಾಂಶ

ಬಿಜೆಪಿ ನಾಯಕರು ಈಗ ಮೌನವಾಗಿರುವುದು ಏಕೆ.? ಸರಣಿ ಹತ್ಯೆಗಳ ಹಿಂದೆ ಯಾರಿದ್ದಾರೆ ಎಂಬುದು ಜಗಜ್ಜಾಹೀರಾಗಿದೆ.ಬಿಜೆಪಿಯವರು ಸನಾತನ ಧರ್ಮದ ಹೆಸರಿನಲ್ಲಿ ಹಾಗೂ ಬಲಪಂಥೀಯರ ಹೆಸರಿನಲ್ಲಿ ಭಯೋತ್ಪಾದನೆ ಸೃಷ್ಟಿಸುವ ನಿಜವಾದ ಟೆರರಿಸ್ಟ್‌ಗಳು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ. 

ಬೆಂಗಳೂರು :  ಬಿಜೆಪಿಯವರು ಸನಾತನ ಧರ್ಮದ ಹೆಸರಿನಲ್ಲಿ ಹಾಗೂ ಬಲಪಂಥೀಯರ ಹೆಸರಿನಲ್ಲಿ ಭಯೋತ್ಪಾದನೆ ಸೃಷ್ಟಿಸುವ ನಿಜವಾದ ಟೆರರಿಸ್ಟ್‌ಗಳು. ಗೌರಿ ಲಂಕೇಶ್‌, ದಾಭೋಲ್ಕರ್‌ ಹಾಗೂ ಪಾನ್ಸರೆ ಹತ್ಯೆ ಹಿಂದೆ ಯಾರಿದ್ದಾರೆ ಎಂಬುದು ಬಯಲಾಗಿದೆ. ಇನ್ನು ಬಿಜೆಪಿಯವರು ಹಾಗೂ ಆರ್‌ಎಸ್‌ಎಸ್‌ ಅವರಿಗೆ ಭಯೋತ್ಪಾದಕರು ಎಂದು ಕರೆಯದೆ ವಿಧಿಯಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಗಂಭೀರ ಆರೋಪ ಮಾಡಿದ್ದಾರೆ.

ಸೋಮವಾರ ಕೆಪಿಸಿಸಿ ಕೇಂದ್ರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಹಾಗೂ ಆರ್‌ಎಸ್‌ಎಸ್‌ನವರು ಬಲಪಂಥೀಯ ಹಾಗೂ ಸನಾತನ ಧರ್ಮದ ಹೆಸರಿನಲ್ಲಿ ಉಗ್ರವಾದ ಮಾಡುವವರು. ನಾಲ್ಕು ವರ್ಷಗಳಿಂದ ನಡೆಯುತ್ತಿದ್ದ ಪ್ರಗತಿಪರರ ಹತ್ಯೆಯ ಹಿಂದೆ ಯಾರಿದ್ದಾರೆ ಎಂಬುದು ಬಯಲಾಗಿದೆ. ರಾಜ್ಯ ಪೊಲೀಸರು ಹಂತಕರು ಯಾರು ಎಂಬುದನ್ನು ಎಳೆ-ಎಳೆಯಾಗಿ ಬಿಚ್ಚಿಡುತ್ತಿದ್ದಾರೆ. ಗೌರಿ ಲಂಕೇಶ್‌, ದಾಭೋಲ್ಕರ್‌, ಪಾನ್ಸರೆ ಹತ್ಯೆ ಹಿಂದೆ ಇರುವವರು ಯಾರು ಎಂಬುದು ಜಗತ್ತಿಗೆ ಗೊತ್ತಾಗಿದೆ. ಬಿಜೆಪಿಯವರು ಈಗ ಏಕೆ ಇದರ ಬಗ್ಗೆ ಬಾಯಿ ಬಿಡುತ್ತಿಲ್ಲ ಎಂದು ಪ್ರಶ್ನೆ ಮಾಡಿದರು.

ಐಸಿಸ್‌ ಆಗಿದ್ದರೆ ಸುಮ್ಮನಿರುತ್ತಿದ್ದರೇ?:  ಸರಣಿ ಹತ್ಯೆಗಳ ಹಿಂದೆ ಯಾರಿದ್ದಾರೆ ಎಂಬುದು ಜಗಜ್ಜಾಹೀರಾಗಿದೆ. ಹೀಗಿದ್ದರೂ ಬಿಜೆಪಿಯವರು ಹಾಗೂ ಮಾಧ್ಯಮಗಳು ಈ ಬಗ್ಗೆ ವರದಿ ಮಾಡುತ್ತಿಲ್ಲ. ಇದೇ ಹತ್ಯೆಗಳ ಹಿಂದೆ ಐಸಿಸ್‌ನಂತಹ ಸಂಘಟನೆ ಇದ್ದಿದ್ದರೆ ಸುಮ್ಮನಿರುತ್ತಿದ್ದರೇ? ಮಾಧ್ಯಮಗಳು ಇಂಚಿಂಚೂ ವರದಿ ಮಾಡುತ್ತಿದ್ದವು. ಬಿಜೆಪಿಯವರು ಅದನ್ನೇ ಅಸ್ತ್ರವಾಗಿ ಮಾಡಿಕೊಳ್ಳುತ್ತಿದ್ದರು. ಇದೀಗ ಸನಾತನ ಧರ್ಮ ಸಂಘಟನೆಯ ಕೈವಾಡವಿದೆ ಎಂದು ಪೊಲೀಸ್‌ ತನಿಖೆಯಿಂದ ಸ್ಪಷ್ಟವಾಗಿದೆ. ಈಗ ಬಿಜೆಪಿ ಮೌನ ವಹಿಸುತ್ತಿರುವುದು ಏಕೆ ಎಂದು ಪ್ರಶ್ನಿಸಿದ ಅವರು, ಬಿಜೆಪಿಯವರೇ ನಿಜವಾದ ಉಗ್ರವಾದಿಗಳು ಎಂದು ಆರೋಪಿಸಿದರು.

ಬಿಜೆಪಿಯವರು ಸನಾತನ ಧರ್ಮದ ಹೆಸರಿನಲ್ಲಿ ಹಾಗೂ ಬಲಪಂಥೀಯರ ಹೆಸರಿನಲ್ಲಿ ಭಯೋತ್ಪಾದನೆ ಸೃಷ್ಟಿಸುವ ನಿಜವಾದ ಟೆರರಿಸ್ಟ್‌ಗಳು. ಗೌರಿ ಲಂಕೇಶ್‌, ದಾಭೋಲ್ಕರ್‌ ಹಾಗೂ ಪಾನ್ಸರೆ ಹತ್ಯೆ ಹಿಂದೆ ಯಾರಿದ್ದಾರೆ ಎಂಬುದು ಬಯಲಾಗಿದೆ. ಇನ್ನು ಬಿಜೆಪಿಯವರು ಹಾಗೂ ಆರ್‌ಎಸ್‌ಎಸ್‌ ಅವರಿಗೆ ಭಯೋತ್ಪಾದಕರು ಎಂದು ಕರೆಯದೆ ವಿಧಿಯಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಗಂಭೀರ ಆರೋಪ ಮಾಡಿದ್ದಾರೆ.

ಸೋಮವಾರ ಕೆಪಿಸಿಸಿ ಕೇಂದ್ರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಹಾಗೂ ಆರ್‌ಎಸ್‌ಎಸ್‌ನವರು ಬಲಪಂಥೀಯ ಹಾಗೂ ಸನಾತನ ಧರ್ಮದ ಹೆಸರಿನಲ್ಲಿ ಉಗ್ರವಾದ ಮಾಡುವವರು. ನಾಲ್ಕು ವರ್ಷಗಳಿಂದ ನಡೆಯುತ್ತಿದ್ದ ಪ್ರಗತಿಪರರ ಹತ್ಯೆಯ ಹಿಂದೆ ಯಾರಿದ್ದಾರೆ ಎಂಬುದು ಬಯಲಾಗಿದೆ. ರಾಜ್ಯ ಪೊಲೀಸರು ಹಂತಕರು ಯಾರು ಎಂಬುದನ್ನು ಎಳೆ-ಎಳೆಯಾಗಿ ಬಿಚ್ಚಿಡುತ್ತಿದ್ದಾರೆ. ಗೌರಿ ಲಂಕೇಶ್‌, ದಾಭೋಲ್ಕರ್‌, ಪಾನ್ಸರೆ ಹತ್ಯೆ ಹಿಂದೆ ಇರುವವರು ಯಾರು ಎಂಬುದು ಜಗತ್ತಿಗೆ ಗೊತ್ತಾಗಿದೆ. ಬಿಜೆಪಿಯವರು ಈಗ ಏಕೆ ಇದರ ಬಗ್ಗೆ ಬಾಯಿ ಬಿಡುತ್ತಿಲ್ಲ ಎಂದು ಪ್ರಶ್ನೆ ಮಾಡಿದರು.

ಐಸಿಸ್‌ ಆಗಿದ್ದರೆ ಸುಮ್ಮನಿರುತ್ತಿದ್ದರೇ?:  ಸರಣಿ ಹತ್ಯೆಗಳ ಹಿಂದೆ ಯಾರಿದ್ದಾರೆ ಎಂಬುದು ಜಗಜ್ಜಾಹೀರಾಗಿದೆ. ಹೀಗಿದ್ದರೂ ಬಿಜೆಪಿಯವರು ಹಾಗೂ ಮಾಧ್ಯಮಗಳು ಈ ಬಗ್ಗೆ ವರದಿ ಮಾಡುತ್ತಿಲ್ಲ. ಇದೇ ಹತ್ಯೆಗಳ ಹಿಂದೆ ಐಸಿಸ್‌ನಂತಹ ಸಂಘಟನೆ ಇದ್ದಿದ್ದರೆ ಸುಮ್ಮನಿರುತ್ತಿದ್ದರೇ? ಮಾಧ್ಯಮಗಳು ಇಂಚಿಂಚೂ ವರದಿ ಮಾಡುತ್ತಿದ್ದವು. ಬಿಜೆಪಿಯವರು ಅದನ್ನೇ ಅಸ್ತ್ರವಾಗಿ ಮಾಡಿಕೊಳ್ಳುತ್ತಿದ್ದರು. ಇದೀಗ ಸನಾತನ ಧರ್ಮ ಸಂಘಟನೆಯ ಕೈವಾಡವಿದೆ ಎಂದು ಪೊಲೀಸ್‌ ತನಿಖೆಯಿಂದ ಸ್ಪಷ್ಟವಾಗಿದೆ. ಈಗ ಬಿಜೆಪಿ ಮೌನ ವಹಿಸುತ್ತಿರುವುದು ಏಕೆ ಎಂದು ಪ್ರಶ್ನಿಸಿದ ಅವರು, ಬಿಜೆಪಿಯವರೇ ನಿಜವಾದ ಉಗ್ರವಾದಿಗಳು ಎಂದು ಆರೋಪಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

KSRTC ಬಸ್ ಡ್ರೈವರ್ ಹಾರ್ನ್ ಮಾಡಿದ್ದೇ ತಪ್ಪಾಯ್ತಂತೆ; ಊರಿನ ಜನರೆಲ್ಲಾ ಸೇರಿಕೊಂಡು ಧರ್ಮದೇಟು ಕೊಟ್ಟರು!
ದೆಹಲಿ ಗಲಭೆ ಪ್ರಕರಣ: ಉಮರ್ ಖಾಲಿದ್‌ಗೆ ಮಧ್ಯಂತರ ಜಾಮೀನು ಮಂಜೂರು!