ಡಿ.ಕೆ. ಶಿವಕುಮಾರ್ ಗೆ ದಿನೇಶ್‌ ಗುಂಡೂರಾವ್ ತಾಕೀತು

Published : Apr 15, 2019, 08:22 AM IST
ಡಿ.ಕೆ. ಶಿವಕುಮಾರ್ ಗೆ  ದಿನೇಶ್‌ ಗುಂಡೂರಾವ್ ತಾಕೀತು

ಸಾರಾಂಶ

ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಇದೀಗ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವ ಡಿ.ಕೆ ಶಿವಕುಮಾರ್ ಹಾಗೂ ಎಂ.ಬಿ ಪಾಟೀಲ್ ಗೆ ಸೂಚನೆ ನೀಡಿದ್ದಾರೆ. 

ಬೆಂಗಳೂರು :  ಪ್ರತ್ಯೇಕ ಲಿಂಗಾಯತ ಧರ್ಮದ ತೀರ್ಮಾನ ಆ ಸಮಾಜ ಹಾಗೂ ಸರ್ಕಾರದ ನಿರ್ಧಾರಕ್ಕೆ ಬಿಟ್ಟಿರುವ ವಿಚಾರ. ಹೀಗಾಗಿ ಸಚಿವರಾದ ಡಿ.ಕೆ. ಶಿವಕುಮಾರ್‌ ಹಾಗೂ ಎಂ.ಬಿ. ಪಾಟೀಲ್‌ ಅವರಿಗೆ ಈ ವಿಚಾರದ ಬಗ್ಗೆ ಮಾತನಾಡದಿರಲು ತಾಕೀತು ಮಾಡಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

ಅಲ್ಲದೆ, ಇಬ್ಬರೂ ನಾಯಕರ ಹೇಳಿಕೆಗಳಿಗೂ ಕಾಂಗ್ರೆಸ್‌ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ. ಅದು ಅವರವರ ವೈಯಕ್ತಿಕ ಅಭಿಪ್ರಾಯಗಳು ಮಾತ್ರ ಎಂದು ಸ್ಪಷ್ಟಪಡಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರತ್ಯೇಕ ಧರ್ಮದ ವಿಚಾರ ಆ ಸಮಾಜದ ಬಯಕೆ ಹಾಗೂ ಸಮಾಜದ ಬಹುತೇಕರ ಅಭಿಪ್ರಾಯದಂತೆ ಮುಂದುವರೆಯುತ್ತದೆ. ಈ ಬಗ್ಗೆ ಚುನಾವಣಾ ಸಂದರ್ಭದಲ್ಲಿ ಹೇಳಿಕೆ ನೀಡಿ ಗೊಂದಲ ಸೃಷ್ಟಿಸುವ ಅಗತ್ಯವಿಲ್ಲ. ಹೀಗಾಗಿ ಇಬ್ಬರೂ ನಾಯಕರಿಗೂ ಅನವಶ್ಯಕ ಹೇಳಿಕೆಗಳನ್ನು ನೀಡದಂತೆ ತಾಕೀತು ಮಾಡಲಾಗಿದೆ ಎಂದು ಹೇಳಿದರು.

ಮಂಡ್ಯದಲ್ಲಿ ಅಕ್ರಮ ಹಣ ಸಾಗಿಸಲಾಗುತ್ತಿದೆ ಎಂಬ ಬಿ.ಎಸ್‌. ಯಡಿಯೂರಪ್ಪ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅಕ್ರಮ ಹಣ ಸಾಗಾಟ ಮಾಡುತ್ತಿರುವುದು ಬಿಜೆಪಿಯವರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹೆಲಿಕಾಪ್ಟರ್‌ನಿಂದ ದೊಡ್ಡ ಕಪ್ಪು ಪಟ್ಟಿಗೆ ಕೆಳಗಿಳಿಸಲಾಗಿದೆ. ಅದನ್ನು ಗೌಪ್ಯವಾಗಿ ಪ್ರತ್ಯೇಕ ಕಾರಿನಲ್ಲಿ ಹೊರಗೆ ಸಾಗಿಸಲಾಗಿದೆ. ಅದು ಯಾವ ಪೆಟ್ಟಿಗೆ ಎಂಬುದನ್ನು ತನಿಖೆ ನಡೆಸಬೇಕು. ಈ ಪೆಟ್ಟಿಗೆ ಬಗ್ಗೆ ಐಟಿ ಅಧಿಕಾರಿಗಳು ಕ್ರಮ ಕೈಗೊಳ್ಳುವುದಿಲ್ಲ. ಹೀಗಾಗಿ ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು ಎಂದು ಹೇಳಿದರು.

ದೇಶದಲ್ಲಿ ಏ.11ರಿಂದ ಮೇ.19ರವೆರೆಗೆ ಏಳು ಹಂತಗಳಲ್ಲಿ ಮತದಾನ. ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಮತದಾನ. ಭಾರತದಲ್ಲಿ 543 ಲೋಕಸಭಾ ಕ್ಷೇತ್ರ, ಕರ್ನಾಟಕದಲ್ಲಿ 28.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದೆಹಲಿಯಲ್ಲೂ ಸಿದ್ದು ಸಿದ್ದು, ಡಿಕೆ ಡಿಕೆ ಸದ್ದು: ಎರಡೂ ಬಣಗಳಿಂದ ಘೋಷಣೆಗಳ ಸಮರ
ಪವಿತ್ರ ಶಕ್ತಿ ಮೇಲೆ ಬಿಜೆಪಿ, ಆರೆಸ್ಸೆಸ್‌ ದಾಳಿ: ಸಿಎಂ ಸಿದ್ದರಾಮಯ್ಯ ಕಿಡಿ