ದಿನೇಶ್ ಗುಂಡೂರಾವ್ ಮುಂದೆ ಸಿಎಂ ಆಗ್ತಾರೆ, ಮೇಯರ್ ಶಾಸಕಿಯಾಗ್ತಾರೆ ?: ಕಾಂಗ್ರೆಸ್ ಶಾಸಕ ಭವಿಷ್ಯ

Published : Sep 21, 2017, 11:26 PM ISTUpdated : Apr 11, 2018, 12:45 PM IST
ದಿನೇಶ್ ಗುಂಡೂರಾವ್ ಮುಂದೆ ಸಿಎಂ ಆಗ್ತಾರೆ, ಮೇಯರ್ ಶಾಸಕಿಯಾಗ್ತಾರೆ ?: ಕಾಂಗ್ರೆಸ್ ಶಾಸಕ ಭವಿಷ್ಯ

ಸಾರಾಂಶ

ರಾಷ್ಟ್ರೀಯ ನಾಯಕರೊಂದಿಗೆ ನೇರ ಸಂಪರ್ಕ ಹೊಂದಿದ್ದಾರೆ. ಮುಂದಿನ ದಿನಗಳಲ್ಲಿ ಅವರು ಮುಖ್ಯಮಂತ್ರಿ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಮುಖ್ಯಮಂತ್ರಿಯಾಗುವ ಎಲ್ಲಾ ಅರ್ಹತೆಗಳೂ ಅವರಿಗಿದೆ

ಬೆಂಗಳೂರು(ಸೆ.21): ಕೆಪಿಸಿಸಿ ಕಾರ್ಯಾಧ್ಯಕ್ಷ  ದಿನೇಶ್ ಗುಂಡೂರಾವ್ ಅವರು ಮುಂದೆ ರಾಜ್ಯದ ಮುಖ್ಯಮಂತ್ರಿ ಯಾಗುವುದರಲ್ಲಿ ಅನುಮಾನ ವಿಲ್ಲ. ಅದೇ ರೀತಿ ಈಗ ಮೇಯರ್ ಆಗಿರುವ ಜಿ. ಪದ್ಮಾವತಿ ಅವರು ರಾಜಾಜಿನಗರ ವಿ‘ಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಮುಂದೆ ಶಾಸಕರಾಗಿ ಆಯ್ಕೆಯಾಗುತ್ತಾರೆ.

ಕೊಳಚೆ ನಿರ್ಮೂಲನಾ ಮಂಡಳಿ ಅಧ್ಯಕ್ಷರೂ ಆದ ಚಿಕ್ಕಪೇಟೆ ಶಾಸಕ ಆರ್.ವಿ. ದೇವರಾಜ್, ಗಾಂಧಿನಗರ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಕೊಳಗೇರಿ ನಿವಾಸಿಗಳಿಗೆ 933 ಮನೆಗಳ ನಿರ್ಮಾಣ ಕಾರ್ಯಕ್ರಮದಲ್ಲಿ ಹೀಗಂತ ಭವಿಷ್ಯ ನುಡಿಯುವ ಮೂಲಕ ಎಲ್ಲರ ಹುಬ್ಬೇರುವಂತೆ ಮಾಡಿದರು. ದಿನೇಶ್ ಗುಂಡೂರಾವ್ ಪ್ರ‘ಭಾವಿ ಪ್ರಬಲ ನಾಯಕ, ಅವರು ಪಕ್ಷದ ರಾಷ್ಟ್ರೀಯ ನಾಯಕರೊಂದಿಗೆ ನೇರ ಸಂಪರ್ಕ ಹೊಂದಿದ್ದಾರೆ. ಮುಂದಿನ ದಿನಗಳಲ್ಲಿ ಅವರು ಮುಖ್ಯಮಂತ್ರಿ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಮುಖ್ಯಮಂತ್ರಿಯಾಗುವ ಎಲ್ಲಾ ಅರ್ಹತೆಗಳೂ ಅವರಿಗಿದೆ ಎಂದು ಅವರು ಹೇಳಿದರು.

ಅದೇ ರೀತಿ ಪ್ರಸ್ತುತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮೇಯರ್ ಆಗಿರುವ ಜಿ. ಪದ್ಮಾವತಿ ಅವರು 2018ರ ಚುನಾವಣೆಯಲ್ಲಿ ರಾಜಾಜಿನಗರ ವಿಧಾನಸಭಾ ಕ್ಷೇತ್ರದಿಂದ ಸ್ಫರ್ಧಿಸುತ್ತಾರೆ. ಇದಕ್ಕೆ ಸಚಿವರಾದ ಕೆ.ಜೆ. ಜಾರ್ಜ್ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಸಮ್ಮತಿಸಿದ್ದಾರೆ. ಹಾಗಾಗಿ ಮೇಯರ್ ಆಗಿ ಉತ್ತಮ ಕಾರ್ಯಗಳನ್ನು ಮಾಡಿರುವ ಅವರು ಮುಂದೆ ಶಾಸಕಿಯಾದರೆ ಜನರಿಗಾಗಿ ಇನ್ನೂ ಉತ್ತಮ ಕೆಲಸಗಳನ್ನು ಮಾಡುತ್ತಾರೆ ಎಂದರು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಖರ್ಗೆ ಪ್ರಧಾನಿ ಆಗಲಿಲ್ಲ, ನಾನು ಮಂತ್ರಿ ಆಗಲಿಲ್ಲ, ನೋವು ತೋಡಿಕೊಂಡ ಬಸವರಾಜ ರಾಯರೆಡ್ಡಿ
ಕಾಂಗ್ರೆಸ್‌ನಲ್ಲಿ ಡಿನ್ನರ್‌, ಇನ್ನರ್‌ ಪಾಲಿಟಿಕ್ಸ್‌ ನಿಲ್ಲುತ್ತಿಲ್ಲ: ಛಲವಾದಿ ನಾರಾಯಣಸ್ವಾಮಿ