ಸೀತಾ ಮಾತೆಯ ತವರಿನಿಂದ ಶ್ರೀ ರಾಮನ ಹುಟ್ಟೂರಿಗೆ ನೇರ ಬಸ್ ಸೇವೆ

Published : May 12, 2018, 01:38 PM IST
ಸೀತಾ ಮಾತೆಯ ತವರಿನಿಂದ ಶ್ರೀ ರಾಮನ ಹುಟ್ಟೂರಿಗೆ ನೇರ ಬಸ್ ಸೇವೆ

ಸಾರಾಂಶ

ಸೀತಾಮಾತೆಯ ತವರೂರಾದ ನೇಪಾಳದ ಜನಕಪುರದಿಂದ ರಾಮನ ಹುಟ್ಟೂರಾದ ಅಯೋಧ್ಯೆಯವರೆಗೆ ನೇರ ಬಸ್ ಸೇವೆಯನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ ಹಾಗೂ ನೇಪಾಳ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಅವರು ಉದ್ಘಾಟಿಸಿದರು. ‘ರಾಮಾಯಣ ಸರ್ಕೀಟ್’ ಮಹತ್ವಾಕಾಂಕ್ಷಿ ಯೋಜನೆಯ ಅಡಿ ಈ ಸೇವೆಯನ್ನು ಲೋಕಾರ್ಪಣೆ ಮಾಡಲಾಗಿದೆ. 

ಜನಕಪುರ: ಸೀತಾಮಾತೆಯ ತವರೂರಾದ ನೇಪಾಳದ ಜನಕಪುರದಿಂದ ರಾಮನ ಹುಟ್ಟೂರಾದ ಅಯೋಧ್ಯೆಯವರೆಗೆ ನೇರ ಬಸ್ ಸೇವೆಯನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ ಹಾಗೂ ನೇಪಾಳ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಅವರು ಉದ್ಘಾಟಿಸಿದರು. ‘ರಾಮಾಯಣ ಸರ್ಕೀಟ್’ ಮಹತ್ವಾಕಾಂಕ್ಷಿ ಯೋಜನೆಯ ಅಡಿ ಈ ಸೇವೆಯನ್ನು ಲೋಕಾರ್ಪಣೆ ಮಾಡಲಾಗಿದೆ. 

‘ಈ ಎರಡೂ ಪವಿತ್ರ ಊರುಗಳನ್ನು ಸಂಪರ್ಕಿಸಲಾಗಿದೆ. ಇದೊಂದು ಐತಿಹಾಸಿಕ ಕ್ಷಣ’ ಎಂದು ಮೋದಿ ಈ ಸಂದರ್ಭದಲ್ಲಿ  ಬಣ್ಣಿಸಿದರು. ಐತಿಹಾಸಿಕ ಜಾನಕಿ ದೇವಾಲಯಕ್ಕೆ ಭೇಟಿ ನೀಡಿ ಷೋಡಶೋಪಚಾರ ಪೂಜೆ ನೆರವೇರಿಸಿದರು. ಬಳಿಕ ಬಸ್ ಸೇವೆಯನ್ನು ಅವರು ಲೋಕಾರ್ಪಣೆ  ಮಾಡಿದರು. ಇಲ್ಲಿಗೆ ಬಂದ ಮೊದಲ ಭಾರತದ ಪ್ರಧಾನಿ ಮೋದಿ ಆಗಿದ್ದಾರೆ.

ನೇಪಾಳ ಮತ್ತು ಭಾರತದಲ್ಲಿ ರಾಮಾಯಣ ದಲ್ಲಿನ ಐತಿಹಾಸಿಕ ಸ್ಥಳಗಳನ್ನು ಜೋಡಿಸುವ ಪ್ರವಾಸೋದ್ಯಮ ಯೋಜನೆಯೇ ‘ರಾಮಾಯಣ  ಸರ್ಕೀಟ್’. ಇದರನ್ವಯ ಜನಕಪುರ (ನೇಪಾಳ), ಅಯೋಧ್ಯೆ, ನಂದಿಗ್ರಾಮ, ಶೃಂಗವೇರ್‌ಪುರ ಮತ್ತು ಚಿತ್ರಕೂಟ (ಉತ್ತರಪ್ರದೇಶ), ಸೀತಾಮಢಿ, ದರ್ಭಂಗಾ ಮತ್ತು ಬಕ್ಸರ್ (ಬಿಹಾರ), ಚಿತ್ರಕೂಟ (ಮಧ್ಯಪ್ರದೇಶ), ಮಹೇಂದ್ರಗಿರಿ (ಒಡಿಶಾ), ಜಗದಲ್‌ಪುರ (ಛತ್ತೀಸ್‌ಗಢ), ನಾಸಿಕ್ ಮತ್ತು ನಾಗಪುರ (ಮಹಾರಾಷ್ಟ್ರ), ಭದ್ರಾಚಲಂ (ತೆಲಂಗಾಣ), ಹಂಪಿ (ಕರ್ನಾಟಕ) ಹಾಗೂ  ರಾಮೇಶ್ವರಂ (ತಮಿಳುನಾಡು)- ಈ 15 ಊರುಗಳು ಯೋಜನೆಯಲ್ಲಿವೆ. 

ಜಾನಕಿ ದೇವಾಲಯಕ್ಕೆ ಭೇಟಿ ನೀಡಿದ ಮೋದಿ ಅವರನ್ನು ನೇಪಾಳ ಪ್ರಧಾನಿ ಓಲಿ ಸ್ವಾಗತಿಸಿದರು ಹಾಗೂ ಮೋದಿ ಅವರ ಭೇಟಿಯನ್ನು ಪ್ರಶಂಸಿಸಿದರು. ಮೋದಿ ಮಾತನಾಡಿ, ‘ಜನಕರಾಜ  ಹಾಗೂ ಸೀತಾಮಾತೆಯ ತವರೂರಾದ ಜನಕಪುರಿಗೆ ಬಂದಿದ್ದಕ್ಕೆ ತುಂಬಾ  ಸಂತಸವಾಗಿದ್ದು, ಜನಕರಾಜ/ ಸೀತೆಗೆ ಗೌರವ ಸಲ್ಲಿಸಲು ಇಲ್ಲಿಗೆ ಬಂದಿದ್ದೇನೆ’ ಎಂದರು. ಮೋದಿ ಅವರನ್ನು ನೋಡಲು ಸಾವಿರಾರು ಜನರು ದೇವಾಲಯಕ್ಕೆ ದೌಡಾಯಿಸಿದ್ದರು. ಜನಕಪುರಿಯು ಸೀತಾಮಾತೆಯ ಜನ್ಮಸ್ಥಳ. ಸೀತೆಯ ಸ್ಮರಣೆಗಾಗಿ 1910ರಲ್ಲಿ ಜಾನಕಿ ದೇವಾಲಯ ನಿರ್ಮಿಸಲಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

'ಕುಡುಕರ ಲಿವರ್‌ಗೆ ಸರ್ಕಾರದ ಗ್ಯಾರಂಟಿ ಕೊಡಿ..' ಅಬಕಾರಿ ಆದಾಯ ಹೆಚ್ಚಿಸಲು ಖತರ್ನಾಕ್‌ ಐಡಿಯಾ ಕೊಟ್ಟ ಬಿಜೆಪಿ MLC
ಪ್ರದರ್ಶನದ ವೇಳೆ ಝೂನಲ್ಲಿ ಆರೈಕೆ ಮಾಡ್ತಿದ್ದವರ ಮೇಲೆಯೇ ಕರಡಿ ಅಟ್ಯಾಕ್: ವೀಡಿಯೋ