ಅಧಿಕಾರ ಹಸ್ತಾಂತರಕ್ಕೆ ಬಾರದೇ ಅಸಮಾಧಾನ ಹೊರಹಾಕಿದ ರೋಹಿಣಿ ಸಿಂಧೂರಿ

Published : Feb 22, 2019, 06:40 PM ISTUpdated : Feb 22, 2019, 06:44 PM IST
ಅಧಿಕಾರ ಹಸ್ತಾಂತರಕ್ಕೆ ಬಾರದೇ ಅಸಮಾಧಾನ ಹೊರಹಾಕಿದ ರೋಹಿಣಿ ಸಿಂಧೂರಿ

ಸಾರಾಂಶ

ಹಾಸನದಿಂದ ವರ್ಗಾವಣೆ ಮಾಡಿದಕ್ಕೆ ರೋಹಿಣಿ ಸಿಂಧೂರಿ ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರಿಸದೇ ಅಸಮಾಧಾನ ಹೊರಹಾಕಿದ್ದಾರೆ.

ಹಾಸನ, [ಫೆ.22]: ದಕ್ಷ ಐಎಎಸ್ ಅಧಿಕಾರಿ ಎಂದೇ ಜನಜನಿತರಾಗಿರುವ ​ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆ ಮಾಡಲಾಗಿದೆ. 

ಬೆಂಗಳೂರಿನ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಕಾರ್ಯದಶಿಯಾಗಿ ಸಿಂಧೂರಿ ಅವರನ್ನ ನಿಯೋಜನೆ ಮಾಡಲಾಗಿದೆ.

ಸಚಿವ ರೇವಣ್ಣ ಬೆಂಬಲಿಗನಿಗೆ ಡಿಸಿ ರೋಹಿಣಿ ಕೊಟ್ಟ ‘ಮರಳೇಟು’

2017 ಜುಲೈ 14 ರಿಂದ ಹಾಸನ ಜಿಲ್ಲಾಧಿಕಾರಿಯಾಗಿ ಪ್ರಮಾಣಿಕತೆಯಿಂದ ಕಾರ್ಯನಿರ್ವಹಿಸಿದ್ದರು. ಇದೀಗ  ಎತ್ತಂಗಡಿ ಮಾಡಿರುವುದು ರೋಹಿಣಿ ಸಿಂಧೂರಿ ಬೇಸರಗೊಂಡಿದ್ದಾರೆ. 

ಅಸಮಾಧಾನಗೊಂಡಿರುವ ರೋಹಿಣಿ ಸಿಂಧೂರಿ ಹಾಸನ ನೂತನ ಡಿಸಿ ಅಕ್ರಂ ಪಾಷಾ ಅವರಿಗೆ ಅಧಿಕಾರ ಹಸ್ತಾಂತರಿಸಲು ಕಚೇರಿಗೆ ಹೋಗಿಲ್ಲ.  ಹಿನ್ನೆಲೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ವೈಶಾಲಿ ಅವರು ನೂತನ ಡಿಸಿ ಅಕ್ರಂ ಪಾಷಾ ಅವರಿಗೆ ಅಧಿಕಾರ ಹಸ್ತಾಂತರಿಸಿದರು. 

ರೋಹಿಣಿ ಸಿಂಧೂರಿ ಸೇರಿ ನಾಲ್ವರು IAS ಅಧಿಕಾರಿಗಳ ಎತ್ತಂಗಡಿ

ಕೆಲ ದಿನಗಳ ಹಿಂದೆ ಅಷ್ಟೇ ಸಚಿವ ಎಚ್.ಡಿ.ರೇವಣ್ಣ ಬೆಂಬಲಿಗರು ಅರೆಕೆರೆಯಲ್ಲಿಅಕ್ರಮವಾಗಿ ಮರಳು ಸಂಗ್ರಹಿಸಿಟ್ಟಿದ್ದರು. ಈ ವಿಷಯ ತಿಳಿಯುತ್ತಿದ್ದಂತೆ ರೋಹಿಣಿ ಸಿಂಧೂರಿ ದಾಳಿ ಮಾಡಿ ಸುಮಾರು 9000 ಟನ್ ಅಕ್ರಮ ದಾಸ್ತಾನು ಮರಳು ಜಪ್ತಿ ಮಾಡಿದ್ದರು.

ಈ ಪ್ರಕರಣದಲ್ಲಿ ಹಾಸನ ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷ ಸೇರಿದಂತೆ ಹಲವು ರಾಜಕೀಯ ನಾಯಕರಿಗೆ ನೋಟಿಸ್ ನೀಡಿದ್ದರು. ಚುನಾಯಿತ ಪ್ರತಿನಿಧಿಯಾಗಿ ಅಪಕೀರ್ತಿಕರ ನಡತೆ ಹೊಂದಿದ್ದೀರಿ, ಹುದ್ದೆಗೆ ತರವಲ್ಲದ ರೀತಿ ನಡೆದುಕೊಂಡಿದ್ದೀರೆಂದು ಚಾಟಿ ಬೀಸಿದ್ದರು.

ಖಡಕ್ ಡಿಸಿ, ಜನ ಮೆಚ್ಚಿದ ದಕ್ಷ ಅಧಿಕಾರಿ ರೋಹಿಣಿ ಸಿಂಧೂರಿ

ಕೇವಲ ಇದು ಅಷ್ಟೇ ಅಲ್ಲದೇ ಹಾಸನದಲ್ಲಿ ಇನ್ನಿತರ ಅಕ್ರಮ ಚುಟುವಟಿಕೆಗಳಿಗೆ ರೋಹಿಣಿ ಸಿಂಧೂರಿ ಬ್ರೇಕ್ ಹಾಕಿದ್ದರು. ಇದರಿಂದ ಸಚಿವ ರೇವಣ್ಣ ಅವರೇ ತಮ್ಮ ಸೋದರರಾದ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಅವರ ಮೇಲೆ ಒತ್ತಡ ಹೇರಿ ರೋಹಿಣಿ ಸಿಂಧೂರಿ ಅವರನ್ನ ವರ್ಗಾವಣೆ ಮಾಡಲಾಗಿದೆ ಎಂಬ ಆರೋಪ ಈಗಾಗಲೇ ರಾಜಕೀಯ ವಲಯದಿಂದ ಕೇಳಿ ಬಂದಿದೆ.

ಜನ ಮೆಚ್ಚಿದ ದಕ್ಷ ಡಿಸಿ ರೋಹಿಣಿಯ ಖಡಕ್ ಅಧಿಕಾರಕ್ಕೆ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಡಿ. ರೇವಣ್ಣ ಬೆದರಿ ವರ್ಗಾವಣೆ ಮಾಡಿಸಿದ್ರಾ? ಒಂದು ವೇಳೆ ಇಲ್ಲದಿದ್ದರೆ ಮತ್ಯಾಕೆ ಅವರನ್ನು ವರ್ಗಾವಣೆ ಮಾಡಿದ್ದು? ಎನ್ನುವ ಹಲವು ಪ್ರಶ್ನೆಗಳು ಸಾರ್ವಜನಕರಲ್ಲಿ ಕೇಳಿಬಂದಿವೆ. ಈ ಬಗ್ಗೆ ರೇವಣ್ಣ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಾದು ಕಾದು ಸುಸ್ತಾದ ಶೆಹಬಾಜ್‌ ಷರೀಫ್‌, ಟರ್ಕಿ ಅಧ್ಯಕ್ಷರ ಜೊತೆ ಪುಟಿನ್‌ ಮೀಟಿಂಗ್‌ ವೇಳೆ ಒಳನುಗ್ಗಿದ ಪಾಕ್‌ ಪ್ರಧಾನಿ!
ಬೆಂಗಳೂರಿನಲ್ಲಿ ಇಷ್ಟೊಂದು ಚಳಿಗೆ ಕಾರಣವೇನು? ಮುಂದಿನ ಮೂರು ದಿನ ಉತ್ತರ ಕರ್ನಾಟಕದಲ್ಲಿ ಶೀತಗಾಳಿ!