ನೋಟು ಅಮಾನ್ಯ ಕ್ರಮ: ಕಾರಣ ನೀಡಲು ನಿರಾಕರಿಸಿದ ರಿಸರ್ವ್ ಬ್ಯಾಂಕ್

Published : Dec 29, 2016, 04:19 PM ISTUpdated : Apr 11, 2018, 01:12 PM IST
ನೋಟು ಅಮಾನ್ಯ ಕ್ರಮ: ಕಾರಣ ನೀಡಲು ನಿರಾಕರಿಸಿದ ರಿಸರ್ವ್ ಬ್ಯಾಂಕ್

ಸಾರಾಂಶ

ಅರ್ಜಿದಾರರು ಕೇಳಿರುವ ಮಾಹಿತಿ ಬಹಿರಂಗ ಪಡಿಸುವುದರಿಂದ ದೇಶದ ಸಾರ್ವಭೌಮತೆ ಹಾಗೂ ಹಿತಾಸಕ್ತಿಗೆ ಧಕ್ಕೆಯುಂಟಾಗುವ ಕಾರಣ ಮಾಹಿತಿ ನೀಡಲು ಸಾಧ್ಯವಿಲ್ಲವೆಂದು ರಿಸರ್ವ್ ಬ್ಯಾಂಕ್ ಹೇಳಿದೆ.

ನವದೆಹಲಿ (ಡಿ.29): ಹಠಾತ್ತಾಗಿ ನೋಟು ಅಮಾನ್ಯ ಕ್ರಮ ಕೈಗೊಳ್ಳಲು ಕಾರಣವೇನು ಎಂದು ಮಾಹಿತಿ ಹಕ್ಕಿನಡಿ ಕೇಳಲಾದ ಪ್ರಶ್ನೆಗೆ ಭಾರತೀಯ ರಿಸರ್ವ್ ಬ್ಯಾಂಕ್ ಉತ್ತರಿಸಲು ನಿರಾಕರಿಸಿದೆ.

ದೊಡ್ಡ ಮುಖಬೆಲೆ ನೋಟುಗಳನ್ನು ಏಕಾಏಕಿ ನಿಷೇಧಿಸಲು ಕಾರಣಗಳೇನು ಎಂದು ಕೇಳಿ ವೆಂಕಟೇಶ್ ನಾಯಕ್ ಎಂಬವರು ಮಾಹಿತಿ ಹಕ್ಕು ಕಾಯ್ದೆಯಡಿಯಲ್ಲಿ ರಿಸರ್ವ್ ಬ್ಯಾಂಕಿಗೆ ಅರ್ಜಿ ಸಲ್ಲಿಸಿದ್ದರು.

ಅರ್ಜಿದಾರರು ಕೇಳಿರುವ ಮಾಹಿತಿ ಬಹಿರಂಗ ಪಡಿಸುವುದರಿಂದ ದೇಶದ ಸಾರ್ವಭೌಮತೆ ಹಾಗೂ ಹಿತಾಸಕ್ತಿಗೆ ಧಕ್ಕೆಯುಂಟಾಗುವ ಕಾರಣ ಮಾಹಿತಿ ನೀಡಲು ಸಾಧ್ಯವಿಲ್ಲವೆಂದು ರಿಸರ್ವ್ ಬ್ಯಾಂಕ್ ಹೇಳಿದೆ.

ಆದರೆ ಅರ್ಜಿದಾರರು ಕೇಳಿರುವ ಮಾಹಿತಿಯು 'ವಿನಾಯಿತಿ' ನೀಡಲ್ಪಟ್ಟ ವರ್ಗದಡಿಯಲ್ಲಿ ಬರುವುದಿಲ್ಲವೆಂದು ಕೇಂದ್ರೀಯ ಮಾಹಿತಿ ಆಯುಕ್ತ ಶೈಲೇಶ್ ಗಾಂಧಿ ಅಭಿಪ್ರಾಯಪಟ್ಟಿದ್ದಾರೆ.

ಈ ಮುಂಚೆಯು ಕೂಡಾ ರಿಸರ್ವ್ ಬ್ಯಾಂಕ್, ನೋಟು ಅಮಾನ್ಯ ಕ್ರಮ ನಿರ್ಧರಿಸಲ್ಪಟ್ಟ ಸಭೆಯ ವಿವರಗಳನ್ನು ಬಹಿರಂಗಪಡಿಸಲು ನಿರಾಕರಿಸಿತ್ತು.

ಅರ್ಜಿದಾರ ವೆಂಟೇಶ್ ನಾಯಕ್, ತಾನು ಈ ಕುರಿತು ಮೇಲ್ಮನವಿ ಸಲ್ಲಿಸುವುದಾಗಿ ಹೇಳಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹಿಂದೂಗಳಿಗಿಂತ ಮುಸ್ಲಿಮರ ಮೇಲೆ ಹೆಚ್ಚು ಬಾಂಡ್: ಎಸ್‌ಡಿಪಿಐ ಆರೋಪಕ್ಕೆ ಅಂಕಿ-ಅಂಶ ಸಮೇತ ಕಮಿಷನರ್ ತಿರುಗೇಟು!
ಕರೆಂಟ್‌ ಅಕೌಂಟಲ್ಲಿ ₹150 ಕೋಟಿ ಅಲ್ಲ, ₹1 ಸಾವಿರ ಕೋಟಿ ವಹಿವಾಟು