ಎದೆಯಲ್ಲಿದ್ದ ಸಿದ್ದರಾಮಯ್ಯರನ್ನು ಬದಿಗಿಟ್ಟ ಎಂಟಿಬಿ ನಾಗರಾಜ್!

Published : Sep 13, 2019, 02:01 PM ISTUpdated : Sep 13, 2019, 02:23 PM IST
ಎದೆಯಲ್ಲಿದ್ದ ಸಿದ್ದರಾಮಯ್ಯರನ್ನು ಬದಿಗಿಟ್ಟ ಎಂಟಿಬಿ ನಾಗರಾಜ್!

ಸಾರಾಂಶ

ಅಂದು ಎದೆ ಬಗೆದರೆ ಸಿದ್ದರಾಮಯ್ಯ ಇದ್ದರು..! | ಆದರೆ ಈಗ ಸಿದ್ದರಾಮಯ್ಯರನ್ನ ಎತ್ತಿ ಸೈಡಿಗಿಟ್ಟಿದ್ದೇನೆ| ಈಗ ನನ್ನ ಎದೆಯಲ್ಲಿ ಮತದಾರರು ಮಾತ್ರ ಇದ್ದಾರೆ| ಗುರುವಿನ ವಿರುದ್ಧ ತಿರುಗಿಬಿದ್ದ ಶಿಷ್ಯ ಎಂಟಿಬಿ ನಾಗರಾಜ್

ಅಂದು ಎದೆ ಬಗೆದರೆ ಸಿದ್ದರಾಮಯ್ಯ ಇದ್ದರು..! | ಆದರೆ ಈಗ ಸಿದ್ದರಾಮಯ್ಯರನ್ನ ಎತ್ತಿ ಸೈಡಿಗಿಟ್ಟಿದ್ದೇನೆ| ಈಗ ನನ್ನ ಎದೆಯಲ್ಲಿ ಮತದಾರರು ಮಾತ್ರ ಇದ್ದಾರೆ| ಗುರುವಿನ ವಿರುದ್ಧ ತಿರುಗಿಬಿದ್ದ ಶಿಷ್ಯ ಎಂಟಿಬಿ ನಾಗರಾಜ್
 

ಬೆಂಗಳೂರು[ಸೆ.13]: ಕಾಂಗ್ರೆಸ್ ಅನರ್ಹ ಶಾಸಕ ಎಂಟಿಬಿ ನಗರಾಜ್ ಸಿದ್ದರಾಮಯ್ಯ ವಿಚಾರವಾಗಿ ಸದ್ಯ ಯೂ-ಟರ್ನ್ ಹೊಡೆದಿದ್ದಾರೆ. ನನ್ನ ಎದೆ ಬಗೆದ್ರೆ ಸಿದ್ದರಾಮಯ್ಯ ಇರ್ತಾರೆ ಎಂದಿದ್ದ ನಾಗರಾಜ್, ಈಗ ಸಿದ್ದರಾಮಯರನ್ನು ಎತ್ತಿ ಸೈಡ್‌ಗೆ ಇಟ್ಟಿದ್ದೀನಿ ಎಂದಿದ್ದಾರೆ.

ಹೌದು ಹೊಸಕೋಟೆಯ ಅನರ್ಹ ಕಾಂಗ್ರೆಸ್ ಶಾಸಕ ಎಂಟಿಬಿ ನಾಗರಾಜ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸುತ್ತಾ 'ಎದೆಯಲ್ಲಿದ್ದ ಸಿದ್ದರಾಮಯ್ಯರನ್ನು ಎತ್ತಿ ಸೈಡ್‌ಗಿಟ್ಟಿದ್ದೇನೆ, ಅಲ್ಲಿ ಈಗ ಮತದಾರರು ಮಾತ್ರ ಇದ್ದಾರೆ. ಸದ್ಯ ಬಿಜೆಪಿ ನಾಯಕರ ವಿರುದ್ಧ ಯಾವುದೇ ಅಸಮಾಧಾನ ಇಲ್ಲ' ಎಂದಿದ್ದಾರೆ. 

'ನನ್ನ ಎದೆ ಬಗೆದರೆ ಸಿದ್ದು ಕಾಣಿಸ್ತಾರೆ, ಸಿದ್ದು ಆಶೀರ್ವಾದದಿಂದಲೇ ಸಚಿವ ಸ್ಥಾನ'!

ಇದಕ್ಕೇನು ಕಾರಣ ಸಿದ್ದರಾಮಯ್ಯರ ಮೇಲೆ ಅಸಮಾಧಾನಕ್ಕೆ ಕಾರಣವೇನು ಎಂದು ಪ್ರಶ್ನಿಸಿದಾಗ 'ಕೆಲವು ಕಾರಣಾಂತರಗಳಿಂದ ಸಿದ್ದರಾಮಯ್ಯರನ್ನು ಬದಿಗಿರಿಸಿದ್ದೇನೆ' ಎಂದಿದ್ದಾರೆ.

"

ಈ ಹಿಂದೆ ಸಮಾವೇಶವೊಂದರಲ್ಲಿ ಸಿದ್ದರಾಮಯ್ಯ ಪರ ಮಾತನಾಡಿದ್ದ ಶಿಷ್ಯ ಎಂಟಿಬಿ 'ಆಂಜನೇಯನ ಎದೆ ಬಗೆದರೆ ಶ್ರೀರಾಮ ಕಂಡಂತೆ ನನ್ನ ಎದೆ ಬಗೆದರೆ ಸಿದ್ದರಾಮಯ್ಯ ಅವರ ಜಪ ಕಾಣುತ್ತದೆ' ಎಂದಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ ಪ್ರಕರಣ: ಎಸ್ಐಟಿ ತನಿಖೆಗೆ ಸಿ.ಟಿ.ರವಿ ಆಗ್ರಹ
ಟೀ ಶರ್ಟ್ ಬಿಟ್ಟು ಖಾದಿ ಧರಿಸಿ ಬಂದು ರಾಜಕೀಯ ಸಂದೇಶ ರವಾನಿಸಿದ ರಾಹುಲ್ ಗಾಂಧಿ