ಕಾಂಗ್ರೆಸ್ ಅನರ್ಹ ಶಾಸಕರಿಗೆ BSY ಸಂಪುಟದಲ್ಲಿ ಸಚಿವ ಸ್ಥಾನ ಫಿಕ್ಸ್

Published : Jul 31, 2019, 10:37 AM ISTUpdated : Jul 31, 2019, 10:41 AM IST
ಕಾಂಗ್ರೆಸ್ ಅನರ್ಹ ಶಾಸಕರಿಗೆ BSY ಸಂಪುಟದಲ್ಲಿ ಸಚಿವ ಸ್ಥಾನ ಫಿಕ್ಸ್

ಸಾರಾಂಶ

ಅತೃಪ್ತ ಶಾಸಕರು ಅನರ್ಹಗೊಂಡು ಕಾಂಗ್ರೆಸ್ ನಿಂದ ಉಚ್ಛಾಟನೆ ಮಾಡಲಾಗಿದೆ. ಆದರೆ ಇದೀಗ ಬಿಜೆಪಿ ಸಂಪುಟದಲ್ಲಿ ಸಚಿವ ಸ್ಥಾನ ನೀಡುವ ಸುಳಿವನ್ನು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. 

ಬೆಂಗಳೂರು [ಜು.31]: ರಾಜ್ಯದಲ್ಲಿ ಸರ್ಕಾರ ರಚನೆ ಮಾಡಿರುವ ಬಿ.ಎಸ್ ಯಡಿಯೂರಪ್ಪ ಅವರು ಅತೃಪ್ತರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಸುಳಿವು ನೀಡಿದ್ದಾರೆ. 

ಲಿಂಗಾಯತ, ಪಂಚಮಸಾಲಿ ಸಮುದಾರಲ್ಲಿ ಒಟ್ಟು  16 ಶಾಸಕರು ಗೆದ್ದಿದ್ದು, ಅವರಲ್ಲಿ ನಾಲ್ವರಿಗೆ ಸಚಿವ ಸ್ಥಾನ ನೀಡಬೇಕು ಎಂದು  ಮನವಿ ಮಾಡಿದ್ದು, ಇದಕ್ಕೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ನಾಲ್ಕು ಸಾಕಾ, ಐದು ಬೇಡವಾ ಎಂದು ಪ್ರಶ್ನೆ ಮಾಡಿದ್ದಾರೆ. 

ಐದು ಬೇಡ, ನಾಲ್ಕು ಮಾಡಿ ಎಂದು ಕೇಳಿದ್ದಕ್ಕೆ ಉತ್ತರ ನೀಡಿದ ಅವರು ನಿಮಗೆ ಎಲ್ಲಾ ಕೊಟ್ಟರೆ ರಾಜೀನಾಮೆ ಕೊಟ್ಟವರು ವಿಷ ಕುಡಿಯಬೇಕಾ ಎಂದು ತಿರುಗಿ ಕೇಳಿದ್ದಾರೆ. 

ಸಂಪುಟ ವಿಸ್ತರಣೆಗೂ ಮುನ್ನ ಮೂವರ ಟೀಮ್ ರೆಡಿ ಮಾಡ್ಕೊಂಡ BSY

ರಾಜೀನಾಮೆ ಕೊಟ್ಟ 16 ಶಾಸಕರು ಏನು ವಿಷ ಕುಡಿಯಬೇಕಾ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಗರಂ ಆಗಿದ್ದಾರೆ. ತಮ್ಮ ಸಮುದಾಯಕ್ಕೆ ಸಚಿವ ಸ್ಥಾನ ಕೇಳಲು ಬಂದವರ ಮೇಲೆ ಅಸಮಾಧಾನ ಹೊರಹಾಕಿದ್ದಾರೆ.  ಡಾಲರ್ಸ್ ಕಾಲೋನಿಯ ‌ನಿವಾಸದಲ್ಲಿ ಸಿಎಂ ಭೇಟಿ ಮಾಡಿದ ಲಿಂಗಾಯತ ‌ಮುಖಂಡರ ಮೇಲೆ ನೂತನ ಸಿಎಂ ಸಿಟ್ಟಾಗಿದ್ದಾರೆ. 

ಮೂರು ದಿನ ಗಡುವು ಕೊಟ್ಟು ಮುಖ್ಯಮಂತ್ರಿ BSY ವಾರ್ನಿಂಗ್

ಇದರಿಂದ ರಾಜೀನಾಮೆ ಕೊಟ್ಟು ಅನರ್ಹರಾದ ಕೆಲವು ಶಾಸಕರಿಗೆ ಬಿ.ಎಸಸ್.ಯಡಿಯೂರಪ್ಪ ಸಂಪುಟದಲ್ಲಿ ಸಚಿವ ಸ್ಥಾನ ಖಚಿತವಾದಂತಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ
ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು