ಇಬ್ಬರು ಅತೃಪ್ತರಿಂದ ರಾಜಕೀಯ ನಿವೃತ್ತಿ?

Published : Jul 30, 2019, 09:35 AM IST
ಇಬ್ಬರು ಅತೃಪ್ತರಿಂದ ರಾಜಕೀಯ ನಿವೃತ್ತಿ?

ಸಾರಾಂಶ

ಅತೃಪ್ತರಾಗಿ ಮುಂಬೈಗೆ ತೆರಳಿದವರಲ್ಲಿ ಐವರು ವಾಪಸಾಗಿದ್ದಾರೆ. ಅನರ್ಹತೆಗೊಂಡ ಬಳಿ ಮರಳಿದ ನಾಯಕರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಅಲ್ಲದೇ ಇಬ್ಬರು ನಿವೃತ್ತಿ ಬಗ್ಗೆಯೂ ಮಾತನಾಡಿದ್ದಾರೆ.

ಬೆಂಗಳೂರು [ಜು.30]: ಬರೋಬ್ಬರಿ ಇಪ್ಪತ್ತು ಮೂರು ದಿನಗಳ ಅಜ್ಞಾತವಾಸದಿಂದ ಹೊರ ಬಂದ ಅತೃಪ್ತ ಕಾಂಗ್ರೆಸ್‌ ಶಾಸಕರು, ತಮ್ಮ ಶಾಸಕತ್ವವನ್ನು ಅನರ್ಹಗೊಳಿಸಿದ ಸ್ಪೀಕರ್‌ ರಮೇಶ್‌ ಕುಮಾರ್‌ ಹಾಗೂ ಕಾಂಗ್ರೆಸ್‌ನ ಪ್ರಮುಖ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. 
ಜತೆಗೆ, ತಾವು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಯಾರು ಕಾರಣ, ಇದರ ಹಿಂದಿನ ಘಟನೆಗಳು ಏನು ಎಂಬ ಬಗ್ಗೆ ಸ್ಫೋಟಕ ಮಾಹಿತಿಯನ್ನು ಇನ್ನು ಮೂರು ದಿನಗಳೊಳಗೆ ಸುದ್ದಿಗೋಷ್ಠಿ ನಡೆಸಿ ಬಹಿರಂಗಪಡಿಸುವ ಘೋಷಣೆಯನ್ನು ಮಾಡಿದರು.

ನಿವೃತ್ತಿ ? : ಇದೇ ವೇಳೆ ಎಸ್‌.ಟಿ. ಸೋಮಶೇಖರ್‌ ಹಾಗೂ ಎಂ.ಟಿ.ಬಿ. ನಾಗರಾಜ್‌ ರಾಜಕೀಯ ನಿವೃತ್ತಿಯ ಇಂಗಿತ ವ್ಯಕ್ತಪಡಿಸಿದ್ದಾರೆ. ನಮಗೆ ಬಿಜೆಪಿಗೆ ಹೋಗುವ ಬಗ್ಗೆ ಯಾವುದೇ ಒಲವಿಲ್ಲ. ಪ್ರಸ್ತುತ ರಾಜಕೀಯ ಬೆಳವಣಿಗೆಗಳಿಂದ ತೀವ್ರ ಬೇಸರವಾಗಿದೆ. 

ಕ್ಷೇತ್ರದ ಜನರೊಂದಿಗೆ ಚರ್ಚಿಸಿ ರಾಜಕೀಯ ಜೀವನಕ್ಕೆ ವಿದಾಯ ಹೇಳುತ್ತೇವೆ ಎಂದು ಇಬ್ಬರೂ ನಾಯಕರು ಹೇಳಿಕೊಂಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನೇತ್ರದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಲಲಿತಮ್ಮ
ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?