
ಬೆಂಗಳೂರು [ಆ.11]: ಭಾರೀ ಮಳೆಯಿಂದ ಸಕಲೇಶಪುರ- ಸುಬ್ರಹ್ಮಣ್ಯ ಘಟ್ಟಪ್ರದೇಶದಲ್ಲಿ ಸತತ ಭೂಕುಸಿತ ಉಂಟಾಗುತ್ತಿರುವುದರಿಂದ ನೈಋುತ್ಯ ರೈಲ್ವೆಯು ಆ.23ರ ವರೆಗೂ ಬೆಂಗಳೂರು- ಮಂಗಳೂರು ಮಾರ್ಗದ ರೈಲುಗಳ ಸಂಚಾರ ರದ್ದುಗೊಳಿಸಿದೆ.
ಸಕಲೇಶಪುರ- ಸುಬ್ರಹ್ಮಣ್ಯ ಘಟ್ಟಪ್ರದೇಶದಲ್ಲಿ ಭಾರೀ ಪ್ರಮಾಣದ ಮಳೆ ಆಗುತ್ತಿರುವುದರಿಂದ ಭೂಕುಸಿತ ಉಂಟಾಗಿ ರೈಲ್ವೆ ಹಳಿ ಮೇಲೆ ದೊಡ್ಡ ಪ್ರಮಾಣದ ಕಲ್ಲು, ಮಣ್ಣು, ಮರಗಳು ಬಿದ್ದಿವೆ.
ಕರ್ನಾಟಕ ಪ್ರವಾಹದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಕಳೆದ ಐದು ದಿನಗಳಲ್ಲಿ ಈ ಮಾರ್ಗದಲ್ಲಿ 30 ಬಾರಿ ಭೂಕುಸಿತ ಉಂಟಾಗಿದೆ. ರೈಲ್ವೆ ಸಿಬ್ಬಂದಿ ಹಾಗೂ ಕಾರ್ಮಿಕರು ತೆರವು ಕಾರ್ಯಚರಣೆಯಲ್ಲಿ ತೊಡಗಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ರೈಲು ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ ಎಂದು ನೈಋುತ್ಯ ರೈಲ್ವೆ ತಿಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.