ಬೆಳಗಾವಿ ಆಯ್ತು, ಈಗ ಬಳ್ಳಾರಿ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ

Published : Sep 19, 2018, 07:17 PM IST
ಬೆಳಗಾವಿ ಆಯ್ತು, ಈಗ ಬಳ್ಳಾರಿ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ

ಸಾರಾಂಶ

ಬೆಳಗಾವಿಯ ಬಂಡಾಯದ ಬೆಂಕಿ ಶಮನವಾದ ಬೆನ್ನಲ್ಲೇ ಬಳ್ಳಾರಿ ಜಿಲ್ಲೆಯಲ್ಲೂ ಅಸಮಾಧಾನದ ಬೆಂಕಿ ಕಾಣಿಸಿಕೊಂಡಿದೆ. ಸಚಿವ ಸ್ಥಾನದ ಸಂಬಂಧ ಬೆಳಗಾವಿ ಗಾಳಿ ಗಣಿನಾಡು ಬಳ್ಳಾರಿಗೂ ಬೀಸಲಾರಂಭಿಸಿದೆ.

ಬಳ್ಳಾರಿ,(ಸೆ.19): ಬೆಳಗಾವಿಯ ಬಂಡಾಯದ ಬೆಂಕಿ ಶಮನವಾದ ಬೆನ್ನಲ್ಲೇ ಬಳ್ಳಾರಿ ಜಿಲ್ಲೆಯಲ್ಲೂ ಅಸಮಾಧಾನದ ಬೆಂಕಿ ಕಾಣಿಸಿಕೊಂಡಿದೆ. ಸಚಿವ ಸ್ಥಾನದ ಸಂಬಂಧ ಬೆಳಗಾವಿ ಗಾಳಿ ಗಣಿನಾಡಿಗೂ ಬೀಸಲಾರಂಭಿಸಿದೆ.

ಬಳ್ಳಾರಿ ಗ್ರಾಮೀಣ ಶಾಸಕ ನಾಗೇಂದ್ರಗೆ ಸಚಿವ ಸ್ಥಾನ ನೀಡುವಂತೆ ರಮೇಶ್​ ಜಾರಕಿಹೊಳಿ ಹೇಳಿದ್ದು, ಇದು ಕೆಲವು ಶಾಸಕರ ಅಸಮಾಧಾನಕ್ಕೆ ಕಾರಣವಾಗಿದೆ. ಹೊಸದಾಗಿ ಬಂದವರಿಗೆ ಸಚಿವ ಸ್ಥಾನ ಹೇಗೆ ಕೊಡುತ್ತೀರಿ? ಅಂತ ಕೆಲ ಶಾಸಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಕಳೆದ ಕೆಲ ದಿನಗಳಿಂದ ಜಾರಕಿಹೊಳಿ ಬ್ರದರ್ಸ್ ನಡೆ ಕಾಂಗ್ರೆಸ್​ ಪಕ್ಷದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದು, ಮೈತ್ರಿ ಸರ್ಕಾರ ಉರುಳುವ ಮಟ್ಟಕ್ಕೆ ಬಂದು ನಿಂತಿತ್ತು. ಆದರೆ, ಖುದ್ದು ಸಿಎಂ ಕುಮಾರಸ್ವಾಮಿ ಅವರೇ ಅಖಾಡಕ್ಕೆ ಇಳಿದು ಜಾರಕಿಹೊಳಿ ಸಹೋದರರ ಸಿಟ್ಟು ತಣ್ಣಗಾಗಿಸಿದ್ದಾರೆ. 

ಆದರೆ, ಸಿಎಂ ಮುಂದೆ ರಮೇಶ ಜಾರಕಿಹೊಳಿ ಕೆಲ ಷರತ್ತುಗಳನ್ನ ಹಾಕಿದ್ದು, ಅದರಲ್ಲಿ ಬಳ್ಳಾರಿ ಜಿಲ್ಲೆಗೆ ಒಂದು ಸಚಿವ ಸ್ಥಾನ ನೀಡಬೇಕು, ಅದರಲ್ಲಿ ತಮ್ಮ ಸಮುದಾಯದ ಶಾಸಕ ನಾಗೇಂದ್ರಗೆ ಸಚಿವ ಸ್ಥಾನ ನೀಡುವಂತೆ ರಮೇಶ್ ಜಾರಕಿಹೊಳಿ ಲಾಬಿ ನಡೆಸಿದ್ದರು. ಇದು ಬಳ್ಳಾರಿ ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ.

ನಿನ್ನೆ ಮೊನ್ನೆ ಪಕ್ಷಕ್ಕೆ ಬಂದವರಿಗೆ ಸಚಿವ ಸ್ಥಾನ ಹೇಗೆ ಕೊಡ್ತೀರಿ? ಇತರೆ ಬಳ್ಳಾರಿ ಜಿಲ್ಲೆಯ ಕಾಂಗ್ರೆಸ್ ಶಾಸಕರಾದ ತುಕಾರಾಂ, ಭೀಮಾನಾಯ್ಕ, ಪಿ.ಟಿ. ಪರಮೇಶ್ವರ ನಾಯ್ಕ ಗರಂ ಅಗಿದ್ದಾರೆ.

ಒಟ್ಟಿನಲ್ಲಿ ಬೆಳಗಾವಿಯ ಜಾರಕಿಹೊಳಿ ಸಹೋದರರನ್ನು ಸಮಾಧಾನಗೊಳಿಸಿರುವುದರ ಬೆನ್ನಲ್ಲೇ ಬಳ್ಳಾರಿ ನಾಯಕರು ಸಿಡಿದೆದ್ದಿರುವುದು ಕಾಂಗ್ರೆಸ್ ಹಾಗೂ ಮೈತ್ರಿ ಸರ್ಕಾರಕ್ಕೆ ಮತ್ತೊಂದು ತಲೆ ನೋವಾಗಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಹಸ್ಯ ಡಿನ್ನರ್ ಮೀಟಿಂಗ್‌ನಲ್ಲಿ 'ಅಹಿಂದ' ಮಾಸ್ಟರ್ ಪ್ಲಾನ್! ಸಿಎಂ ಕುರ್ಚಿ ಉಳಿಸಿಕೊಳ್ಳಲು ಬೆಳಗಾವಿಯಲ್ಲಿ ಹೊಸ ರಣತಂತ್ರ?
India News Live: ಅಣುವಲಯ ಇನ್ನು ಖಾಸಗಿಗೂ ಮುಕ್ತ : ‘ಶಾಂತಿ’ ಮಸೂದೆಗೆ ಅನುಮೋದನೆ