
ಹುಣಸೂರು (ಡಿ.31): ಹನುಮ ಜಯಂತಿ ರದ್ದಾದ ಹಿನ್ನಲೆಯಲ್ಲಿ ಶಾಂತಿಯುತ ಹನಮ ಜಯಂತಿ ಆಚರಣೆಗೆ ಜಿಲ್ಲಾಡಳಿತ ಅನುಮತಿ ನೀಡಿದೆ.
ಹನುಮ ಜಯಂತಿ ಆಚರಣೆಗೆ ಅನುಮತಿ ನೀಡುವಂತೆ ಕಾಂಗ್ರೆಸ್ ಶಾಸಕ ಮಂಜುನಾಥ್ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಸಲ್ಲಿಸಿದ್ದರು. ಮಂಜುನಾಥ್ ಮನವಿ ಮೆರೆಗೆ ಜಿಲ್ಲಾಧಿಕಾರಿ ಒಪ್ಪಿಗೆ ನೀಡಿದ್ದಾರೆ.
ಹನುಮ ಜಯಂತಿ ಮೆರವಣಿಗೆ ವಿಚಾರದಲ್ಲಿ ಗಲಭೆ ಉಂಟಾಗಿ ಹನುಮ ಜಯಂತಿ ರದ್ದಾಗಿತ್ತು. ಹುಣಸೂರು ಕ್ಷೇತ್ರದ ಸಾರ್ವಜನಿಕರು, ಕ್ಷೇತ್ರದ ಶಾಸಕರ ಮೇಲೆ ಒತ್ತಡ ತಂದಿದ್ದರಿಂದ ಶಾಂತಿಯುತ ಹನುಮ ಜಯಂತಿ ಆಚರಣೆಗೆ ಮಂಜುನಾಥ್ ಅನುಮತಿ ಕೇಳಿದ್ದರು. ಜಿಲ್ಲಾಡಳಿತ ಒಪ್ಪಿಗೆ ನೀಡಿದೆ. ಶೀಘ್ರದಲ್ಲಿಯೇ ಹುಣಸೂರಿನಲ್ಲಿ ಹನಮ ಜಯಂತಿ ನಡೆಯಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.