ಬಿಜೆಪಿ ಸೇರಲು ನೌಕರಿ ಬಿಟ್ಟ ಜಿಲ್ಲಾಧಿಕಾರಿ : ಎಲೆಕ್ಷನ್ ಗೆ ನಿಲ್ತಾರೆ ಚೌಧರಿ ?

Published : Aug 25, 2018, 04:05 PM ISTUpdated : Sep 09, 2018, 08:58 PM IST
ಬಿಜೆಪಿ ಸೇರಲು ನೌಕರಿ ಬಿಟ್ಟ ಜಿಲ್ಲಾಧಿಕಾರಿ : ಎಲೆಕ್ಷನ್ ಗೆ ನಿಲ್ತಾರೆ ಚೌಧರಿ ?

ಸಾರಾಂಶ

ಜಿಲ್ಲಾಧಿಕಾರಿಯೋರ್ವರು ತಮ್ಮ ಹುದ್ದೆಗೆ ರಾಜೀನಾಮೆಗೆ ನೀಡಿದ್ದು, ರಾಜಕೀಯ ರಂಗ ಪ್ರವೇಶ ಮಾಡುವ ಸಾಧ್ಯತೆ ಇದೆ. ಬಿಜೆಪಿ ಸೇರ್ಪಡೆಗೊಂಡು ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿದ್ದಾರೆ ಎನ್ನಲಾಗಿದೆ. 

ರಾಯ್ಪುರ :  ಜಿಲ್ಲಾಧಿಕಾರಿಯೋರ್ವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಬಿಜೆಪಿ ಸೇರಲಿದ್ದಾರೆ ಎನ್ನಲಾಗಿದೆ. 2005ನೇ  ಬ್ಯಾಚಿನ ಐಎಎಸ್ ಅಧಿಕಾರಿ ಚೌಧರಿ ಅವರು ಇದೀಗ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. 

ಆದರೆ ಈ ಬಗ್ಗೆ ಅವರು ಯಾವುದೇ ರೀತಿಯಾದ ಪ್ರತಿಕ್ರಿಯೆಯನ್ನೂ ಕೂಡ ನೀಡಿಲ್ಲ. ಆದರೆ ಮೂಲಗಳ ಪ್ರಕಾರವಾಗಿ ಅವರು ಬಿಜೆಪಿಯನ್ನು ಸೇರಿ ರಾಜಕಾರಣಕ್ಕೆ ಧುಮುಕಲಿದ್ದಾರೆ ಎನ್ನಲಾಗಿದೆ. ಆದರೆ ಈ ವಿಚಾರವಿನ್ನೂ ಕೂಡ ಖಚಿತವಾಗಿಲ್ಲ. ಆದರೆ ಬಿಜೆಪಿ ಮುಖಂಡರು ಅವರು ಒಂದು ವೇಳೆ ಪಕ್ಷಕ್ಕೆ ಬಂದರೆ ಆತ್ಮೀಯ ಸ್ವಾಗತ ಎಂದು ಹೇಳಿದ್ದಾರೆ. 

 ಇದೇ ವರ್ಷದ ಕೊನೆಯಲ್ಲಿ ಚತ್ತೀಸ್ ಗಢದಲ್ಲಿ ಚುನಾವಣೆ ನಡೆಯುತ್ತಿದ್ದು, ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. 

ಚೌಧರಿ ಅವರು  ಪಟೇಲ್ ಅಗರಿಯಾ ಸಮುದಾಯದವರಾಗಿದ್ದು, ಒಬಿಸಿ ಮತಗಳನ್ನು ಸೆಳಯುವ ಸಲುವಾಗಿ ಬಿಜೆಪಿ ಇವರನ್ನು ಕಣಕ್ಕೆ ಇಳಿಸುವ ಸಾಧ್ಯತೆ ಇದೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

UIDAI Rules: ಯಾವುದೇ ಹೋಟೆಲ್‌ನಲ್ಲಿ ಆಧಾರ್ ಕಾರ್ಡ್ ಫೋಟೋಕಾಪಿ ನೀಡೋ ಅಗತ್ಯವಿಲ್ಲ: ಈ ಹೊಸ ನಿಯಮ ತಿಳ್ಕೊಳ್ಳಿ
ತಾಯಿಯ ಜಾತಿ ಆಧಾರದಲ್ಲೇ ಮಗಳಿಗೆ ಜಾತಿ ಪ್ರಮಾಣಪತ್ರ: ಸುಪ್ರೀಂ ಮಹತ್ವದ ತೀರ್ಪು