ದೀಪಾವಳಿಗೆ ಪಟಾಕಿ ನಿಷೇಧ; ಆದೇಶ ತಿದ್ದುಪಡಿಗೆ ಸಾಧ್ಯವಿಲ್ಲವೆಂದು ಸುಪ್ರೀಂಕೋರ್ಟ್ ಸ್ಪಷ್ಟನೆ

Published : Oct 13, 2017, 03:39 PM ISTUpdated : Apr 11, 2018, 01:12 PM IST
ದೀಪಾವಳಿಗೆ ಪಟಾಕಿ ನಿಷೇಧ; ಆದೇಶ ತಿದ್ದುಪಡಿಗೆ ಸಾಧ್ಯವಿಲ್ಲವೆಂದು ಸುಪ್ರೀಂಕೋರ್ಟ್ ಸ್ಪಷ್ಟನೆ

ಸಾರಾಂಶ

ದೀಪಾವಳಿಗೆ ಪಟಾಕಿಯನ್ನು ಹೊಡೆಯುವಂತಿಲ್ಲವೆಂದು ನಿಷೇಧ ಹೇರಿರುವ  ಆದೇಶವನ್ನು ತಿದ್ದುಪಡಿ ಮಾಡಲು ಸಾಧ್ಯವಿಲ್ಲ ಎಂದು ಇಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ. ಪಟಾಕಿ ಹೊಡೆಯುವುದರ ಮೇಲೆ ನಿಷೇಧ ಹೇರಿರುವುದಕ್ಕೆ ಜನರು ಮತೀಯ ಬಣ್ಣ ಕೊಡುತ್ತಿರುವುದಕ್ಕೆ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

ನವದೆಹಲಿ (ಅ.13): ದೀಪಾವಳಿಗೆ ಪಟಾಕಿಯನ್ನು ಹೊಡೆಯುವಂತಿಲ್ಲವೆಂದು ನಿಷೇಧ ಹೇರಿರುವ  ಆದೇಶವನ್ನು ತಿದ್ದುಪಡಿ ಮಾಡಲು ಸಾಧ್ಯವಿಲ್ಲ ಎಂದು ಇಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ. ಪಟಾಕಿ ಹೊಡೆಯುವುದರ ಮೇಲೆ ನಿಷೇಧ ಹೇರಿರುವುದಕ್ಕೆ ಜನರು ಮತೀಯ ಬಣ್ಣ ಕೊಡುತ್ತಿರುವುದಕ್ಕೆ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

ಜನರು ದೀಪಾವಳಿಯನ್ನು ಆಚರಿಸುವುದು ಬೇಡ ಎಂದು ನಾವು ಹೇಳಿಲ್ಲ. ಆಚರಣೆಯನ್ನು ನಾವು ತಡೆಯುತ್ತಲೂ ಇಲ್ಲ. ಇದೊಂದು ಪ್ರಯೋಗವಷ್ಟೇ. ನಾನು ಕೂಡಾ ಆಧ್ಯಾತ್ಮಿಕ ಒಲವುಳ್ಳ ವ್ಯಕ್ತಿ ಆದರೆ ಪಟಾಕಿ ನಿಷೇಧ ಅದಕ್ಕೆ ಹೊರತಾಗಿದ್ದು ಎಂದು ನ್ಯಾ. ಎ ಕೆ ಸಿಕ್ರಿ ಹೇಳಿದ್ದಾರೆ.

ದೆಹಲಿಯಲ್ಲಿ ವಾಯು ಮಾಲಿನ್ಯ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ದೀಪಾವಳಿಗೆ ಪಟಾಕಿ ಹೊಡೆಯುವಂತಿಲ್ಲವೆಂದು ಸುಪ್ರೀಂಕೋರ್ಟ್ ಆದೇಶಿಸಿತ್ತು. ಪಟಾಕಿ ಮಾರಾಟದ ಮೇಲೂ ನಿರ್ಬಂಧ ಹೇರಿತ್ತು. ಇದನ್ನು ಪ್ರಶ್ನಿಸಿ ಪಟಾಕಿ ಮಾರಾಟಗಾರರು ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಇಂದು ವಿಚಾರಣೆ ನಡೆಸಿದ ನ್ಯಾಯಾಲಯ ಆದೇಶಕ್ಕೆ ತಿದ್ದುಪಡಿ ಮಾಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.  

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಕ್ಷರ ಲೋಕದ ಅವಧಾನಿ: ಕನ್ನಡ ಅಧ್ಯಾಪಕ ಜಿ.ಬಿ.ಹರೀಶರ ಪತ್ರಿಕಾ ಪ್ರತಿಭೆ
ನಿಮ್ಮ ಆರೋಗ್ಯಕ್ಕೆ ನಿಜವಾದದ್ದೇ ಅರ್ಹತೆ: ನಕಲಿ ಉತ್ಪನ್ನಗಳ ವಿರುದ್ಧ ಹರ್ಬಾಲೈಫ್ ಇಂಡಿಯಾದ ಉಪಕ್ರಮ