
ಕೋಲಾರ : ಕೋಲಾರದಲ್ಲಿ ವಿಧಾನಸಭಾ ಚುನಾವಣಾ ಅಖಾಡ ರಂಗೇರಿದೆ. ಪಕ್ಷೇತರರಾಗಿ ಇಲ್ಲಿಂದ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಡಿ.ಕೆ ರವಿ ತಾಯಿ ಗೌರಮ್ಮ ನಿರ್ಧರಿಸಿದ್ದಾರೆ. ಕೋಲಾರ ತಾಲೂಕಿನ ವಿವಿಧೆಡೆ ರವಿ ಅವರ ತಾಯಿ ಗೌರಮ್ಮ ಪ್ರಚಾರದಲ್ಲಿ ತೊಡಗಿದ್ದಾರೆ.
ಈ ವೇಳೆ ಮಾತನಾಡಿದ ಗೌರಮ್ಮ ಜೆಡಿಎಸ್ ಟಿಕೆಟ್ ಕೊಡಿಸುವುದಾಗಿ ಹೇಳಿ ಏನೂ ಮಾಡಿಲ್ಲ. ನನ್ನ ಮಗನ ಸಾವಿನ ಮರು ತನಿಖೆ ಮಾಡಿಸಿ ಕೋಲಾರ ಅಭಿವೃದ್ಧಿ ಮಾಡುವುದು ನನ್ನ ಗುರಿ ಎಂದು ಹೇಳಿದ್ದಾರೆ.
ಇನ್ನು ಕೋಲಾರ ತಾಲೂಕಿನಲ್ಲಿ ಕಳೆದ ಮೂರು ದಿನದಿಂದ ಪ್ರಚಾರ ಕಾರ್ಯದಲ್ಲಿ ಕೈಗೊಂಡಿದ್ದು, ವೇಮಗಲ್ ಹೋಬಳಿಯಲ್ಲಿ ಇಂದು ಪ್ರಚಾರ ನಡೆಸಿದ್ದಾರೆ. ಜೆಡಿಎಸ್ ವಿರುದ್ಧ ಬಂಡಾಯವಾಗಿ ಗೌರಮ್ಮ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ತೀರ್ಮಾನ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.