ದಿಲ್ಲಿಗೆ ಪ್ರಯಾಣಿಸಿದ್ದ ಡಿ.ಕೆ.ಶಿವಕುಮಾರ್ : ಕುತೂಹಲದ ನಡೆ

Published : Jul 09, 2019, 09:30 AM IST
ದಿಲ್ಲಿಗೆ ಪ್ರಯಾಣಿಸಿದ್ದ ಡಿ.ಕೆ.ಶಿವಕುಮಾರ್ : ಕುತೂಹಲದ ನಡೆ

ಸಾರಾಂಶ

ಹಠಾತ್ ದಿಲ್ಲಿಗೆ ತೆರಳಿದ್ದ ಡಿ.ಕೆ.ಶಿವಕುಮಾರ್ ನಡೆ ತೀವ್ರ ಕುತೂಹಲ ಮೂಡಿಸಿದೆ. 

ಬೆಂಗಳೂರು [ಜು.09]: ಸಮ್ಮಿಶ್ರ ಸರ್ಕಾರದ ಶಾಸಕರು ಸಾಲು- ಸಾಲಾಗಿ ರಾಜೀನಾಮೆ ನೀಡುತ್ತಿರುವ ಬೆನ್ನಲ್ಲೇ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಹಠಾತ್ ದೆಹಲಿಗೆ ಪ್ರಯಾಣ ಬೆಳೆಸಿದ್ದು, ವಾಪಸಾಗಿದ್ದಾರೆ. ಅವರ ಈ ನಡೆ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಸೋಮವಾರ ಸದಾಶಿವನಗರದ ಪರಮೇಶ್ವರ್ ಅವರ ಸರ್ಕಾರಿ ಅತಿಥಿಗೃಹದಲ್ಲಿ ನಡೆದ ಸಭೆ ಯಲ್ಲಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಅವರು, ಬಳಿಕ ಮುಂಬೈನಲ್ಲಿರುವ ಅತೃಪ್ತ ಶಾಸಕರನ್ನು ಭೇಟಿ ಮಾಡಲು ಮುಂಬೈಗೆ ತೆರಳುತ್ತಿದ್ದಾರೆ ಎಂದು ವರದಿ ಯಾಗಿತ್ತು. ಆದರೆ, ಮುಂಬೈಗೆ ತೆರಳದೆ ನೇರವಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹಠಾತ್ ದೆಹಲಿಗೆ ತೆರಳಿದ್ದರು.

ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರಕ್ಕೆ ಪತನ ಭೀತಿ ಉಂಟಾಗಿರುವ ಪರಿಸ್ಥಿತಿಯಲ್ಲಿ ದೆಹಲಿಗೆ ಹೋಗಿರುವುದು ಕುತೂಹಲ ಮೂಡಿಸಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Viral Video: 40 ಅಡಿ ಆಳದ ಬಾವಿಗೆ ಬಿದ್ದ ಮೇಕೆಮರಿ; ಜೀವ ಪಣಕ್ಕಿಟ್ಟು ರಕ್ಷಿಸಿದ ಬಾಲಕ!
PM Modi Israel visit: ಭಯೋತ್ಪಾದನೆ ವಿರುದ್ಧ ನಾವು ಹೆಗಲಿಗೆ ಹೆಗಲು ಕೊಟ್ಟು ನಿಲ್ಲುತ್ತೇವೆ: ಇಸ್ರೇಲ್‌ ನೆಲದಲ್ಲಿ ನಿಂತು ಪಾಕ್‌ಗೆ ಮೋದಿ ಎಚ್ಚರಿಕೆ!