ಕಲಾಪದಿಂದ ಹೊರಬಂದ ಡಿಕೆಶಿ: ಅತೃಪ್ತರ ಓಲೈಸಲು ಕಡೇ ಯತ್ನ

Published : Jul 23, 2019, 12:42 PM ISTUpdated : Jul 23, 2019, 01:53 PM IST
ಕಲಾಪದಿಂದ ಹೊರಬಂದ ಡಿಕೆಶಿ: ಅತೃಪ್ತರ ಓಲೈಸಲು ಕಡೇ ಯತ್ನ

ಸಾರಾಂಶ

ವಿಶ್ವಾಸಮತಕ್ಕೆ ಡೆಡ್ ಲೈನ್ ಮೇಲೆ ಡೆಡ್ ಲೈನ್ ನೀಡಲಾಗುತ್ತಿದೆ. ಆದರೆ ರಾಜಕೀಯ ಪ್ರಹಸನ ಮಾತ್ರ ಮುಗಿಯುತ್ತಿಲ್ಲ. ಇತ್ತ ಹೇಗಾದರೂ ಮಾಡಿ ಸರ್ಕಾರ ಉಳಿಸಿಕೊಳ್ಳಲು ಟ್ರಬಲ್ ಶೂಟರ್ ಡಿಕೆ ಶಿವಕುಮಾರ್ ಕೊನೆ ಹಂತದ ಯತ್ನದಲ್ಲಿ ತೊಡಗಿದ್ದಾರೆ.

ಬೆಂಗಳೂರು(ಜು.23) : ವಿಶ್ವಾಸಮತಕ್ಕೆ ಮಂಗಳವಾರ ಸಂಜೆ 6 ಗಂಟೆಗೆ ಸ್ವತಃ ಸ್ಪೀಕರ್ ರಮೇಶ್ ಕುಮಾರ್  ಡೆಡ್ ಲೈನ್ ನೀಡಿದ್ದಾರೆ. ಈ ನಿಟ್ಟಿನಲ್ಲಿ ದೋಸ್ತಿ ಪಡೆ ಅಂತಿಮ ಹಂತದ ಪ್ರಯತ್ನ ನಡೆಸಿದ್ದಾರೆ. 

ಸರ್ಕಾರ ಉಳಿಸಲು ಸಚಿವ ಡಿ.ಕೆ.ಶಿವಕುಮಾರ್ ಕೊನೆ ಹಂತದ ಪ್ರಯತ್ನ ಮಾಡಿದ್ದಾರೆ. ವಿಶ್ವಾಸ ಮತ ಸಾಬೀತು ಪಡಿಸಲು ತಲೆ ಕೆಡಿಸಿಕೊಂಡ ಅವರು ಕಲಾಪದಿಂದಲೇ ಹೊರಬಂದು ಮುಖ್ಯಮಂತ್ರಿ ಕುಮಾರಸ್ವಾಮಿ ಭೇಟಿ ಮಾಡಿದರು. 

ತಾಜ್ ವೆಸ್ಟೆಂಡ್ ನಲ್ಲಿ ಸಿಎಂ ಕುಮಾರಸ್ವಾಮಿ ಭೇಟಿ ಮಾಡಿದ ಡಿಕೆಶಿ ರಾಜಕೀಯ ಮುಂದಿನ ನಡೆಯ ಬಗ್ಗೆ ಚರ್ಚಿಸಿದರು.

ಕರ್ನಾಟಕ ರಾಜಕೀಯದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಒಂದು ವೇಳೆ ವಿಶ್ವಾಸಮತದಲ್ಲಿ ಗೆಲ್ಲಲಾಗದಿದ್ದಲ್ಲಿ ಮೈತ್ರಿ ಪಾಳಯದ ಮುಂದಿನ ನಡೆ ಏನು ಎನ್ನವ ವಿಚಾರವನ್ನು ಟ್ರಬಲ್ ಶೂಟರ್ ಡಿಕೆಶಿ ಸಿಎಂ ಕುಮಾರಸ್ವಾಮಿ ಜೊತೆಗೆ ಗಂಭೀರ ಸಮಾಲೋಚನೆ ನಡೆಸಿದರು.

ಸುವರ್ಣ ನ್ಯೂಸ್ ಆ್ಯಪ್‌ ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿ https://bit.ly/32JJ0DE ಕ್ಲಿಕ್ ಮಾಡಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಂಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಐಟಿ ಪಾರ್ಕ್‌ ಸ್ಥಾಪನೆ: ಸಚಿವ ಪ್ರಿಯಾಂಕ್‌ ಖರ್ಗೆ
ವೋಟ್‌ ಚೋರಿ ವಿರುದ್ಧ ಕಾಂಗ್ರೆಸ್ ರ್‍ಯಾಲಿ.. ನಮ್ಮ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ: ಡಿ.ಕೆ.ಶಿವಕುಮಾರ್‌