ತೆಲಂಗಾಣದಲ್ಲಿ ನಡೆಯಲಿಲ್ಲ ಡಿಕೆಶಿ ಆಟ: ಟ್ರಬಲ್ ಶೂಟರ್ ಆಸೆಗೆ KCR ತಣ್ಣೀರು!

Published : Dec 11, 2018, 11:20 AM IST
ತೆಲಂಗಾಣದಲ್ಲಿ ನಡೆಯಲಿಲ್ಲ ಡಿಕೆಶಿ ಆಟ: ಟ್ರಬಲ್ ಶೂಟರ್ ಆಸೆಗೆ KCR ತಣ್ಣೀರು!

ಸಾರಾಂಶ

ತೆಲಂಗಾಣದಲ್ಲಿ ಅಧಿಕಾರಕ್ಕೇರುವ ಕನಸು ಕಂಡಿದ್ದ ಕಾಂಗ್ರೆಸ್ ಪಕ್ಷ ಹಾಗೂ ಡಿಕೆಶಿಗೆ ಭಾರೀ ನಿರಾಸೆಯಾಗಿದೆ. ಕೆಸಿಆರ್ ನೇತೃತ್ವದ ಟಿಆರ್‌ಎಸ್‌ ಪಕ್ಷ ಸ್ಪಷ್ಟ ಬಹುಮತ ಗಳಿಸುವ ಮೂಲಕ ಕರ್ನಾಟಕದಲ್ಲಿ ಅಧಿಕಾರಕ್ಕೇರಿದಂತೆ ತೆಲಂಗಾಣದಲ್ಲೂ ಗದ್ದುಗೆ ಏರುವ ಕನಸು ಕಂಡಿದ್ದ ಟ್ರಬಲ್ ಶೂಟರ್‌ ಆಸೆಗೆ ತಣ್ಣೀರೆರಚಿದೆ.

ತೆಲಂಗಾಣ[ಡಿ.11]: ಕಾಂಗ್ರೆಸ್‌ ನ ಟ್ರಬಲ್ ಶೂಟರ್ ಎಂದೇ ಕರೆಸಿಕೊಳ್ಳುವ ಡಿಕೆ ಶಿವಕುಮಾರ್ ತೀವ್ರ ನಿರಾಸೆಯಾಗಿದೆ. ತೆಲಂಗಾಣದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾದರೆ ಅಧಿಕಾರಕ್ಕೇರಲು ಪ್ಲ್ಯಾನ್ ರಚಿಸಿದ್ದ ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಹಿನ್ನಡೆಯಾಗಿದೆ. ಚುನಾವಣೋತ್ತರ ಸಮೀಕ್ಷೆಗಳಂತೆ ತೆಲಂಗಾಣದಲ್ಲಿ ಕೆಸಿಆರ್ ನೇತೃತ್ವದ ಟಿಆರ್‌ಎಸ್ ಪಕ್ಷ ಉಳಿದೆಲ್ಲಾ ಪಕ್ಷಗಳನ್ನು ಕ್ಲೀನ್ ಸ್ವೈಪ್ ಮಾಡಿ ಸರಳ ಬಹುಮತ ಗಳಿಸಿದೆ.

ಹೌದು ತೆಲಂಗಾಣದಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದರೆ, ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೇರುವ ಕನಸು ಕಂಡಿತ್ತು. ಇದಕ್ಕಾಗಿ ಕರ್ನಾಟಕದಲ್ಲಿ ಮಾಡಿ್ದಂತೆಯೇ ತೆಲಂಗಾಣದಲ್ಲಿ ಶಾಸಕರನ್ನು ಸೆಳೆಯುವ ಪ್ಲ್ಯಾನ್ ಮಾಡಲಾಗಿತ್ತು. ಇಲ್ಲಿನ ಶಾಸಕರನ್ನು ಸೆಳೆಯುವ ಹಾಗೂ ಬೆಂಗಳೂರಿಗೆ ಶಿಫ್ಟ್ ಮಾಡುವ ಜವಾಬ್ದಾರಿಯನ್ನು ಡಿಕೆಶಿಗೆ ವಹಿಸಲಾಗಿತ್ತು. 

ಓವೈಸಿಗೆ ಕಾಂಗ್ರೆಸ್ ಬೆಂಬಲ!: ರಿಸಲ್ಟ್‌ಗೂ ಮುನ್ನ ಹೈ ಡ್ರಾಮಾ

ಅಹ್ಮದ್ ಪಟೇಲ್ ಸೂಚನೆ ಮೇರೆಗೆ ಖಾಡಕ್ಕಿಳಿದಿದ್ದ ಡಿಕೆಶಿ ಟಿಆರ್ ಎಸ್ ಪಕ್ಷ ಸೋಲಿಸಲು ರಣತಂತ್ರ ಹೆಣೆದಿದ್ದರು. ಇದಕ್ಕಾಗಿ ಪಕ್ಷೇತರ ಸೇರಿದಂತೆ ಟಿಆರ್‌ಎಸ್ ಪಕ್ಷದ ಶಾಸಕರನ್ನೂ ಸಂಪರ್ಕಿಸಿದ್ದರು. ಆದರೀಗ ಈ ಎಲ್ಲಾ ಯೋಜನೆಗಳು ತಲೆಕೆಳಗಾಗಿದ್ದು, ತೆಲಂಗಾಣದಲ್ಲಿ ಕೆಸಿ ಆರ್ ನೇತೃತ್ವದ ಪಕ್ಷ ಭರ್ಜರಿ ಜಯ ಗಳಿಸಿದೆ. ಈ ಮೂಲಕ ಕರ್ನಾಟಕದಲ್ಲಿ ಮಾಡಿದಂತೆ ಸೇಮ್ ಟು ಸೇಮ್ ಪ್ಲ್ಯಾನ್ ತೆಂಗಾಣದಲ್ಲೂ ಮಾಡಲು ಹೋದ ಕಾಂಗ್ರೆಸ್ ಟ್ರಬಲ್ ಶೂಟರ್ ಗೆ ಭಾರೀ ವೈಫಲ್ಯ ಕಂಡಿದ್ದಾರೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ
Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!