ಯಾರು ಏನೇ ಶಿಕ್ಷೆ ಕೊಡ್ಲಿ ಹೇಳಿಕೆ ಬದಲಾಯಿಸಲ್ಲ, ಡಿಕೆಶಿ ಖಡಕ್ ಮಾತು

Published : Oct 19, 2018, 04:15 PM IST
ಯಾರು ಏನೇ ಶಿಕ್ಷೆ ಕೊಡ್ಲಿ ಹೇಳಿಕೆ ಬದಲಾಯಿಸಲ್ಲ, ಡಿಕೆಶಿ ಖಡಕ್ ಮಾತು

ಸಾರಾಂಶ

ಒಕ್ಕಲಿಗರ ಪ್ರಬಲ್ಯವಿರುವ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದಿದೆಯಾ ಎಂಬ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಎಂ.ಬಿ ಪಾಟೀಲ್ ಹೇಳಿಕೆಗೆ ಡಿ.ಕೆ.ಶಿವಕುಮಾರ್ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.

ಬೆಂಗಳೂರು, ಅ.19: ಸದ್ಯ ರಾಜ ರಾಜಕಾರಣದಲ್ಲಿ ಉಪಚುನಾವಣೆ ರಂಗೇರಿದೆ. ಇದರ ಮಧ್ಯೆ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಲಿಂಗಾಯತ ಧರ್ಮದ ಹೇಳಿಕೆ ಬಗ್ಗೆ  ಆರೋಪ-ಪ್ರತ್ಯಾರೋಪಗಳು ಜೋರಾಗೆಯೇ ನಡೆದಿವೆ.

ಒಕ್ಕಲಿಗರ ಪ್ರಬಲ್ಯವಿರುವ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದಿದೆಯಾ ಎಂಬ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಎಂ.ಬಿ ಪಾಟೀಲ್ ಹೇಳಿಕೆಗೆ ಡಿ.ಕೆ.ಶಿವಕುಮಾರ್ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.

ಇಂದು (ಶುಕ್ರವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ಎಂ.ಬಿ ಪಾಟೀಲ್ ದೊಡ್ಡವರು. ಅವರಿಗೆ ಉತ್ತರ ಕೊಡುವಷ್ಟು ದೊಡ್ಡವನಲ್ಲ. ನನ್ನ ಓಟು ಬಿಟ್ಟು ಮತ್ತೆ ಯಾರ ಓಟ್ ನ್ನೂ ಹಾಕಿಸುವ ಧೈರ್ಯ ನನಗಿಲ್ಲ. ನನ್ನ ಕ್ಷೇತ್ರ ಬಿಟ್ಟು ಬೇರೆ ಕ್ಚೇತ್ರದಲ್ಲಿ ಯಾರನ್ನು ಗೆಲ್ಲಿಸುವುದಕ್ಕೂ ಶಕ್ತಿ ಇಲ್ಲ. ಅಷ್ಟು ಪ್ರಭಾವಿಯೂ ನಾನಲ್ಲ. ನನ್ನ ಪತ್ನಿ ಓಟ್ ನ್ನ ಕೂಡ ಹಾಕಿಸುವ ಧೈರ್ಯ ಇಲ್ಲ ಎಂದು ಪರೋಕ್ಷವಾಗಿ ಎಂ.ಬಿ ಪಾಟೀಲ್ ಗೆ ಟಾಂಗ್ ಕೊಟ್ಟರು.

ಡಿಕೆಶಿಗೆ ಎಂ.ಬಿ.ಪಾಟೀಲ್ ಸವಾಲು : ಕ್ಷಮೆ ಯಾಚಿಸಲು ಆಗ್ರಹ

ವೈಯಕ್ತಿಕವಾಗಿ ಅವರು ಯಾರಿಗೆ ಬೇಕಾದರೂ ಮತ ಹಾಕಬಹುದು. ಇದು ಪ್ರಜಾಪ್ರಭುತ್ವದ ಸಂವಿಧಾನದ ವ್ಯವಸ್ಥೆ. ನಾನು ಸಾಮಾನ್ಯ ಕಾರ್ಯಕರ್ತ. ಯಾರು ಏನೇ ಶಿಕ್ಷೆ ಕೊಡಲಿ. ನಾನು ಏನು ಮಾತಾಡೊಲ್ಲ. ನನ್ನ ಮನಸ್ಸಿನಲ್ಲಿ ಇರೋದನ್ನ ಹೇಳಿದ್ದೇನೆ. ನನ್ನ ಹೇಳಿಕೆಯನ್ನ ಬದಲಾಯಿಸುವುದಿಲ್ಲ

ರಾಜಕೀಯ ನಾಯಕರು ಧರ್ಮದ ವಿಚಾರಕ್ಕೆ ತಲೆ ಹಾಕಬಾರದೆಂದು ಹೇಳಿದ್ದೇನೆ. ಆತ್ಮ ಸಾಕ್ಷಿಯಾಗಿ ಮಾತನಾಡಿದ್ದೇನೆ. ನಮ್ಮದೇ ಸಮುದಾಯ ಒಕ್ಕಲಿಗರ ಸಂಘದ ವಿಚಾರ ಬಂದಾಗಲೂ ಅಷ್ಟೇ. ಯಾವುದೇ ಕಾರಣಕ್ಕೂ ನಾನು ಇನ್ನು ಮುಂದೆ ಹಸ್ತಕ್ಷೇಪ ಮಾಡುವುದಿಲ್ಲ. 

ಸಂಘಕ್ಕೆ ಸಹಾಯ ಬೇಕಾದರೆ ಮಾಡುತ್ತೇನೆ. ಆದರೆ ಸಮಾಜದ ವಿಷಯಕ್ಕೆ ಹೋಗುವುದಿಲ್ಲ. ನನ್ನ ಹೇಳಿಕೆಗೆ ನಾನು ಈಗಲೂ ಬದ್ಧ ಎಂದು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರಿನ 2ನೇ ಏರ್‌ಪೋರ್ಟ್‌, ಗುರುತಿಸಿರೋ ಈ 3 ಸ್ಥಳಗಳಲ್ಲಿ ಯಾವುದು ಬೆಸ್ಟ್? ಅಧ್ಯಯನಕ್ಕೆ ಟೆಂಡರ್ ಕರೆದ ಸರ್ಕಾರ!
ನವೋದಯ ಪರೀಕ್ಷೆಯಲ್ಲಿ ಅಕ್ರಮ ಆರೋಪ; ಬೀದರ್‌ನಲ್ಲಿ ಬಿಇಓಗೆ ವಿದ್ಯಾರ್ಥಿ ಪೋಷಕರಿಂದ ತರಾಟೆ