
ಬೆಂಗಳೂರು(ಆ.04): ಇಂಧನ ಸಚಿವ ಡಿಕೆ ಶಿವಕುಮಾರ್ ಮನೆ ಮತ್ತು ಕಚೇರಿ ಮೇಲೆ ಐಟಿ ದಾಳಿ ಮಾಡಲು ಸಿಎಂ ಸಿದ್ದರಾಮಯ್ಯ ಕಾರಣ ಅಂತ ಡಿಕೆಶಿ ತಾಯಿ ಗೌರಮ್ಮ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ತಮ್ಮ ಇಬ್ಬರು ಮಕ್ಕಳ ಬೆಂಬಲಕ್ಕೆ ಸಿಎಂ ಸಿದ್ದರಾಮಯ್ಯ ಎಂದು ನಿಂತಿಲ್ಲ. ನನ್ನ ಮಗನ ಮನೆ ಮೇಲೆ ದಾಳಿಯಾದಾಗ ಸಿದ್ದರಾಮಯ್ಯ ಯಾಕೆ ಪ್ರಶ್ನೆ ಮಾಡಲಿಲ್ಲ. ನನ್ನ ಮಕ್ಕಳ ಇಂದಿನ ಸ್ಥಿತಿಗೆ ಸಿದ್ದರಾಮಯ್ಯ ಅವರೇ ಕಾರಣ ನನ್ನ ಮಕ್ಕಳು ತಪ್ಪು ಮಾಡಿಲ್ಲ, ಜನರಿಗಾಗಿ ಮನೆಯವರನ್ನೆಲ್ಲ ಬಿಟ್ಟು ದುಡಿಯುತ್ತಿದ್ದಾರೆ. ನನ್ನ ಮಗ ಮುಖ್ಯಮಂತ್ರಿಯಾಗ್ತಾನೆ ಅಂತ ಹೀಗೆಲ್ಲಾ ಮಾಡಲಾಗುತ್ತಿದೆ. ಈ ದಾಳಿ ಹಿಂದೆ ಸಿದ್ದರಾಮಯ್ಯ ಕಾರಣ ಅಂತ ಡಿಕೆ ಶಿವಕುಮಾರ ತಾಯಿ ಗೌರಮ್ಮ ಗಂಭೀರ ಆರೋಪ ಮಾಡಿದ್ರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.