ಸಿದ್ದರಾಮಯ್ಯ ಸಿಎಂ ಆಗುವ ಹೇಳಿಕೆಗೆ ಡಿಕೆಶಿ ವ್ಯಾಖ್ಯಾನ

Published : Aug 24, 2018, 09:04 PM ISTUpdated : Sep 09, 2018, 09:22 PM IST
ಸಿದ್ದರಾಮಯ್ಯ ಸಿಎಂ ಆಗುವ ಹೇಳಿಕೆಗೆ ಡಿಕೆಶಿ ವ್ಯಾಖ್ಯಾನ

ಸಾರಾಂಶ

ಮತ್ತೆ ಸಿಎಂ ಆಗುತ್ತೇನೆಂದು ಸಿದ್ದರಾಮಯ್ಯ ಹೇಳಿಕೆ ನೀಡಿರುವುದಿಲ್ಲ. ನನಗೆ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಸಿಎಂ ಆಸೆ ಇರಬಹುದು. ಆದರೆ ಕಾಂಗ್ರೆಸಿನಲ್ಲಿ ಹೈಕಮಾಂಡ್ ಅಂತಿಮ ತೀರ್ಮಾನ  ತೆಗೆದುಕೊಳ್ಳುತ್ತದೆ - ಸಿದ್ದರಾಮಯ್ಯ

ಬೆಂಗಳೂರು[ಆ.24]: ಇನ್ನೊಂದು ಸಲ ಸಿಎಂ ಆಗುವುದಕ್ಕೆ ಜನರು ಆಶೀರ್ವದಿಸುತ್ತಾರೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ತಮ್ಮದೆ ಶೈಲಿಯ ವ್ಯಾಖ್ಯಾನ ನೀಡಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಮತ್ತೆ ಸಿಎಂ ಆಗುತ್ತೇನೆಂದು ಅಪ್ಪಿತಪ್ಪಿಯೂ ಸಿದ್ದರಾಮಯ್ಯ ಅವರು ಹೇಳಿಲ್ಲ. ಹಿರಿಯ ನಾಯಕರಾದ ಅವರು ಕಾಂಗ್ರೆಸ್ ಕಾರ್ಯಕರ್ತರಿಗೆ  ಧೈರ್ಯಕೊಡಲು ಆ ಹೇಳಿಕೆ ನೀಡಿರಬಹುದು. ಮತ್ತೆ ಸಿಎಂ ಆಗುತ್ತೇನೆಂದು ಸಿದ್ದರಾಮಯ್ಯ ಹೇಳಿಕೆ ನೀಡಿರುವುದಿಲ್ಲ. ನನಗೆ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಸಿಎಂ ಆಸೆ ಇರಬಹುದು. ಆದರೆ ಕಾಂಗ್ರೆಸಿನಲ್ಲಿ ಹೈಕಮಾಂಡ್ ಅಂತಿಮ ತೀರ್ಮಾನ  ತೆಗೆದುಕೊಳ್ಳುತ್ತದೆ ಎಂದು ಉಹಾಪೋಹಗಳನ್ನು ತಳ್ಳಿಹಾಕಿದರು.

ಚುನಾವಣೆಯ ಫಲಿತಾಂಶ ಪ್ರಕಟವಾದಾಗ ಎಚ್.ಡಿ.ದೇವೇಗೌಡ ಅವರೇ ಕಾಂಗ್ರೆಸ್ ಪಕ್ಷದಲ್ಲಿಯೇ ಯಾರಾದರೂ ಸಿಎಂ ಆಗಿ ಎಂದು ಹೇಳಿದ್ದರು. ಆದರೆ ಜೆಡಿಎಸ್ ಪಕ್ಷವೇ ಸಿಎಂ ಸ್ಥಾನ ಇಟ್ಟುಕೊಳ್ಳಿ ಎಂದು ನಾವೇ ಹೇಳಿದ್ದೆವು. ರಾಹುಲ್ ಗಾಂಧಿ, ಗುಲಾಂ ನಬಿ ಆಜಾದ್ ಸೇರಿದಂತೆ ಹಲವು ನಾಯಕರ ಪರಿಶ್ರಮದಿಂದಲೇ ಸಮ್ಮಿಶ್ರ ಸರ್ಕಾರ ರಚನೆಯಾಗಿದೆ ಎಂದು ತಿಳಿಸಿದರು.

ಈ ಸುದ್ದಿಯನ್ನು ಓದಿ: ನಾನು ಇನ್ನೊಂದು ಸಲ ಸಿಎಂ ಆಗ್ತೀನಿ : ಮೇಲೆ ಇರುವವರು ಕೆಳಗೆ ಬರಲೇಬೇಕು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಡ್ನಿ ಶೂಟಿಂಗ್ ದಾಳಿಗೆ ಪಾಕಿಸ್ತಾನ ಸಂಪರ್ಕ: ಆರೋಪಿ ಲಾಹೋರ್ ಮೂಲದ ನವೀದ್ ಅಕ್ರಮ್; ಫೋಟೋ ವೈರಲ್!
ತುರುವೇಕೆರೆ: ದೇವರ ಮೇಲೆ ಹಾಕಿದ್ದ 500 ಗ್ರಾಂ ಸರ, 10 ಸಾವಿರ ರೂ. ನಗದು ಕದ್ದ ಕಳ್ಳರು!