ನನ್ನನ್ನು ಜೈಲಿಗೆ ಕಳುಹಿಸಲು ಬಿಎಸ್‌ವೈ, ರಾಮುಲು ಪಿತೂರಿ : ಡಿಕೆಶಿ

Published : Oct 18, 2018, 09:33 AM IST
ನನ್ನನ್ನು ಜೈಲಿಗೆ ಕಳುಹಿಸಲು ಬಿಎಸ್‌ವೈ, ರಾಮುಲು ಪಿತೂರಿ : ಡಿಕೆಶಿ

ಸಾರಾಂಶ

ಬಿ.ಎಸ್‌.ಯಡಿಯೂರಪ್ಪ ಹಾಗೂ ಮಾಜಿ ಸಚಿವ ಶ್ರೀರಾಮುಲು ಇಬ್ಬರೂ ಸೇರಿಕೊಂಡು ನನ್ನನ್ನು ಜೈಲಿಗೆ ಕಳಿಸಲು ಪಿತೂರಿ ನಡೆಸುತ್ತಿದ್ದಾರೆ ಎಂದು ಸಚಿವ ಡಿ.ಕೆ.ಶಿವಕುಮಾರ್‌ ಆರೋಪಿಸಿದರು. 

ಲಕ್ಷ್ಮೇಶ್ವರ: ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಮಾಜಿ ಸಚಿವ ಶ್ರೀರಾಮುಲು ಇಬ್ಬರೂ ಸೇರಿಕೊಂಡು ನನ್ನನ್ನು ಜೈಲಿಗೆ ಕಳಿಸಲು ಪಿತೂರಿ ನಡೆಸುತ್ತಿದ್ದಾರೆ ಎಂದು ಸಚಿವ ಡಿ.ಕೆ.ಶಿವಕುಮಾರ್‌ ಆರೋಪಿಸಿದರು. ಇದರೊಂದಿಗೆ ತಮ್ಮ ಮೇಲೆ ನಡೆದ ಆದಾಯ ಇಲಾಖೆ ದಾಳಿಗೆ ಬಿಜೆಪಿ ಮುಖಂಡರೇ ಕಾರಣ ಎಂದು ದೂರಿದರು. 

ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಆಡಳಿತ ನಡೆಸುತ್ತಿದ್ದು, ಬಿಜೆಪಿ ಮುಖಂಡರು ಸುಪ್ರೀಂಕೋರ್ಟ್‌ನಂತೆ ಮಾತನಾಡುತ್ತಿರುವುದು ನನ್ನ ಈ ಅನುಮಾನಕ್ಕೆ ಕಾರಣವಾಗಿದೆ ಎಂದು ತಿಳಿಸಿದರು. 

ಬಳ್ಳಾರಿ ಜನರ ಮೇಲೆ ಶ್ರೀರಾಮುಲುಗೆ ವಿಶ್ವಾಸವಿಲ್ಲ. ಇದೇ ಕಾರಣಕ್ಕಾಗಿ ವಿಧಾನಸಭೆ ಚುನಾವಣೆ ವೇಳೆ ಬೇರೆ ಕ್ಷೇತ್ರದಿಂದ ಸ್ಪರ್ಧಿಸಿದರು. ಅಲ್ಲದೇ ಬಳ್ಳಾರಿಯಲ್ಲಿ ಅವರ ಟೀಂ ಅಧಿಕಾರ ನಡೆಸುತ್ತಿದ್ದಾಗ ಒಂದು ರೀತಿಯ ಭಯದ ವಾತಾವರಣ ನಿರ್ಮಿಸಿದ್ದರು. ಅದನ್ನು ಹೋಗಲಾಡಿಸಿ ಈಗ ನೆಮ್ಮದಿಯ ವಾತಾವರಣ ನಿರ್ಮಿಸಲು ನಾವು ಶ್ರಮಿಸಿದ್ದೇವೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದುಬೈನಲ್ಲಿ ಕುಳಿತು ಕರಾವಳಿಯಲ್ಲಿ ಕೋಮು ಭಾವನೆ ಕೆರಳಿಸುವ ಪೋಸ್ಟ್ ಹಾಕುತ್ತಿದ್ದವನ ಬಂಧಿಸಿದ ಮಂಗಳೂರು ಪೊಲೀಸರು
ರಾಜ್ಯದಲ್ಲಿ ಕಳೆದ 10 ವರ್ಷಗಳಲ್ಲೇ ದಾಖಲೆಯ ಚಳಿ, ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಬೆಂಗಳೂರಿನಲ್ಲಿ ಮುಂದಿನ 1 ವಾರ ಹೇಗಿರಲಿದೆ?