ಕಾಂಗ್ರೆಸ್ ನ ಯಾರ್ಯಾರಿಗೆ ಬಿಜೆಪಿಯಿಂದ ಗಾಳ..?

Published : Aug 31, 2018, 11:54 AM ISTUpdated : Sep 09, 2018, 08:59 PM IST
ಕಾಂಗ್ರೆಸ್ ನ ಯಾರ್ಯಾರಿಗೆ ಬಿಜೆಪಿಯಿಂದ ಗಾಳ..?

ಸಾರಾಂಶ

ಬಿಜೆಪಿಯು ಯಾರನ್ನು ಸಂಪರ್ಕ ಮಾಡಿದೆ ಎನ್ನುವ ವಿಚಾರ ತಮಗೆ ತಿಳಿದಿದೆ.  ಸಮಯ ಬಂದಾಗ ಈ ವಿಚಾರಗಳು ತಾನಾಗೇ ಬಹಿರಂಗವಾಗಲಿವೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್  ತಿಳಿಸಿದ್ದಾರೆ. 

ಬೆಂಗಳೂರು: ಬಿಜೆಪಿಯವರು ಯಾರಿಗೆಲ್ಲಾ ಆಮಿಷ ಒಡುತ್ತಿದ್ದಾರೆ ಎಂಬುದು ನನಗೆ ಗೊತ್ತಿದೆ. ಕಾಂಗ್ರೆಸ್‌ನ ಯಾವ ಶಾಸಕರೊಂದಿಗೆ ಅವರು ಸಂಪರ್ಕದಲ್ಲಿದ್ದಾರೆ ಎಂಬ ಸಂಗತಿಯೂ ಗೊತ್ತಿದೆ. ಸಮಯ ಬಂದಾಗ ಈ ವಿಚಾರಗಳು ತಾನಾಗೇ ಬಹಿರಂಗವಾಗಲಿವೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್  ತಿಳಿಸಿದ್ದಾರೆ. 

ಕಾಂಗ್ರೆಸ್‌ನ ಪ್ರಭಾವಿ ವ್ಯಕ್ತಿಗಳು ನನ್ನೊಂದಿಗೆ ಸಂಪರ್ಕದಲ್ಲಿದ್ದಾರೆ ಎಂಬ ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಹೇಳಿಕೆಗೆ ವಿಧಾನಸೌಧದಲ್ಲಿ ಗುರುವಾರ ಪ್ರತಿಕ್ರಿಯೆ ನೀಡಿದ ಅವರು, ಇಂತಹ ರಾಜಕಾರಣವನ್ನು ಮಾಡುವುದು ಬಿಜೆಪಿಯವರು ಮೊದಲು ಬಿಡಬೇಕು. 

ಯಾರಿಗೆಲ್ಲಾ ಆಮಿಷ ಒಡ್ಡುತ್ತಿದ್ದಾರೆ ಎಂಬುದು ಗೊತ್ತಿದೆ. ಯಾವ ಶಾಸಕರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂಬ ಸಂಗತಿ ನಮಗೆ ಗೊತ್ತಿಲ್ಲ ಎಂದು ಬಿಜೆಪಿಯವರು ತಿಳಿದುಕೊಂಡಿದ್ದಾರೆ. ನಮಗೆ ಎಲ್ಲಾ ಮಾಹಿತಿಯೂ ಇದೆ. ಸಮಯ ಬಂದಾಗ ಯಾರು ಯಾರ ಜತೆ ಮಾತನಾಡಿದ್ದಾರೆ ಎಂಬುದು ತಾನಾಗಿಯೇ ಬಹಿರಂಗವಾಗಲಿದೆ ಎಂದು ಸೂಚ್ಯವಾಗಿ ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

'ಮಾದೇಶ್ವರ ದಯಬಾರದೆ..' ಯೂಟ್ಯೂಬ್‌ನಲ್ಲಿ ಟ್ರೆಂಡ್‌ ಆದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದಪ್ರಸಾದ್‌ ಹಾಡು!
ರಾಜ್ಯಾದ್ಯಂತ ಎಲ್‌ಕೆಜಿ ಯಿಂದ ಪಿಯುಸಿವರೆಗೆ ಕಲಿಕಾ ಸಮಯದ ಅವಧಿ ಬದಲಾಯಿಸುವಂತೆ ಶಿಕ್ಷಣ ಇಲಾಖೆಗೆ ಮಕ್ಕಳ ಆಯೋಗ ಪತ್ರ