ನಾಲ್ಕು ದಿನಗಳ ದಿಗ್ಬಂಧನ ಬಳಿಕ ಹೊರಬಂದ ಡಿಕೆಶಿ ಮಾಧ್ಯಮಗಳಿಗೆ ಹೇಳಿದ್ದೇನು?

Published : Aug 05, 2017, 10:51 AM ISTUpdated : Apr 11, 2018, 12:58 PM IST
ನಾಲ್ಕು ದಿನಗಳ ದಿಗ್ಬಂಧನ ಬಳಿಕ ಹೊರಬಂದ ಡಿಕೆಶಿ ಮಾಧ್ಯಮಗಳಿಗೆ ಹೇಳಿದ್ದೇನು?

ಸಾರಾಂಶ

“ಕಳೆದ 3 ದಿನಗಳಿಂದ ತಾವೆಲ್ಲಾ ನನ್ನ ಮನೆ, ನನ್ನ ಸ್ನೇಹಿತರ ಮನೆ, ಸಂಬಂಧಿಕರ ಮನೆ… ಇಲ್ಲೆಲ್ಲಾ ಹಗಲೂ ರಾತ್ರಿ ಕಾಯ್ದಿದ್ದೀರಿ… ಡೆಮಾಕ್ರಸಿಯಲ್ಲಿ ನೀವೂ ಒಂದು ಭಾಗ. ನಿಮ್ಮದೇ ವಿಚಾರಗಳನ್ನು ಬಿತ್ತರಿಸಿದ್ದೀರಿ. ನೀವು ನನ್ನ ಬಗ್ಗೆ ಒಳ್ಳೆಯದು ಹೇಳಿರಬಹುದು, ಕೆಟ್ಟದ್ದರೂ ಹೇಳಿರಬಹುದು, ಏನು ಹೇಳಿದಿರಿ ಎಂದು ಕೇಳುವುದಿಲ್ಲ…. ಎಲ್ಲದಕ್ಕೂ ಉತ್ತರ ಕೊಡುತ್ತೇನೆ…

ಬೆಂಗಳೂರು(ಆ. 05): ಐಟಿ ರೇಡ್’ಗೆ ತುತ್ತಾಗಿರುವ ಇಂಧನ ಸಚಿವ ಡಿಕೆ ಶಿವಕುಮಾರ್ 3 ದಿನಗಳ ನಂತರ ತಮ್ಮ ಮನೆಯಿಂದ ಹೊರಬಂದಿದ್ದಾರೆ. ಒಂದಿಷ್ಟೂ ವಿಚಲಿತಗೊಂಡವರಂತೆ ಕಂಡುಬರದ ಡಿಕೆಶಿ, ಸತ್ಯಕ್ಕೇ ಗೆಲುವಾಗುತ್ತದೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಮೂರು ದಿನಗಳ ಕಾಲ ತಮ್ಮನ್ನು ಕಾದ, ರಕ್ಷಣೆ ಕೊಟ್ಟ ಪೊಲೀಸರಿಗೆ ಡಿಕೆಶಿ ಧನ್ಯವಾದ ಹೇಳಿದ್ದಾರೆ. ಮನೆಯಿಂದ ಹೊರಬಂದು ಮಾಧ್ಯಮಗಳೊಂದಿಗೆ ಕೆಲ ಹೊತ್ತು ಮಾತನಾಡಿದ ಡಿಕೆಶಿ ಬಳಿಕ ತಾವು ತಾವು ನಂಬಿರುವ ದೇವರ ದರ್ಶನಕ್ಕೆ ಹೋಗುತ್ತಿರುವುದಾಗಿ ತಿಳಿಸಿ ಅಲ್ಲಿಂದ ಹೊರಟರು.

ಮಾಧ್ಯಮಗಳಿಗೆ ಹೇಳಿದ್ದೇನು?
“ಕಳೆದ 3 ದಿನಗಳಿಂದ ತಾವೆಲ್ಲಾ ನನ್ನ ಮನೆ, ನನ್ನ ಸ್ನೇಹಿತರ ಮನೆ, ಸಂಬಂಧಿಕರ ಮನೆ… ಇಲ್ಲೆಲ್ಲಾ ಹಗಲೂ ರಾತ್ರಿ ಕಾಯ್ದಿದ್ದೀರಿ… ಡೆಮಾಕ್ರಸಿಯಲ್ಲಿ ನೀವೂ ಒಂದು ಭಾಗ. ನಿಮ್ಮದೇ ವಿಚಾರಗಳನ್ನು ಬಿತ್ತರಿಸಿದ್ದೀರಿ. ನೀವು ನನ್ನ ಬಗ್ಗೆ ಒಳ್ಳೆಯದು ಹೇಳಿರಬಹುದು, ಕೆಟ್ಟದ್ದರೂ ಹೇಳಿರಬಹುದು, ಏನು ಹೇಳಿದಿರಿ ಎಂದು ಕೇಳುವುದಿಲ್ಲ…. ಎಲ್ಲದಕ್ಕೂ ಉತ್ತರ ಕೊಡುತ್ತೇನೆ…

“ನಾನು ಯಾವತ್ತೂ ಕಾನೂನು ಮತ್ತು ಸಂವಿಧಾನದ ಚೌಕಟ್ಟು ಮೀರಿ ನಡೆದವನಲ್ಲ. ರೇಡ್’ನಲ್ಲಿ ಏನು ನಡೆಯಿತು ಎಂಬ ಚಿತ್ರಣವನ್ನು ನಾನೀಗ ನೀಡುವುದಿಲ್ಲ. ಎಲ್ಲವನ್ನೂ ಡಾಕ್ಯುಮೆಂಟ್ಸ್ ಹೇಳುತ್ತವೆ. ಪಂಚನಾಮೆ ಮಾಡಿದ್ದನ್ನು ನೀವು ತರಿಸಿ ಬೇಕಾದರೆ ನೋಡಬಹುದು. ಎಲ್ಲದಕ್ಕೂ, ಎಲ್ಲರಿಗೂ ನಾನು ಖಂಡಿತ ಉತ್ತರ ನೀಡುತ್ತೇನೆ,” ಎಂದು ಡಿಕೆಶಿ ಹೇಳಿದರು.

“ನನ್ನ ಕಷ್ಟದ ಕಾಲದಲ್ಲಿ ಯಾರೆಲ್ಲಾ ಇದ್ದಿರಿ, ನನಗೆ ಯಾರೆಲ್ಲಾ ಪ್ರೋತ್ಸಾಹ, ಬೆಂಬಲ ಕೊಟ್ಟಿದ್ದೀರಿ ಅವರಿಗೆಲ್ಲಾ ನನ್ನ ಧನ್ಯವಾದಗಳು ಎಂದು ಹೇಳಿದ ಡಿಕೆ ಶಿವಕುಮಾರ್, ಕೊನೆಗೆ ಸತ್ಯಕ್ಕೇ ಗೆಲುವಾಗುತ್ತದೆ,” ಎಂದು ಸಂದೇಶ ಕೊಟ್ಟು ತಾವು ದೇವಸ್ಥಾನಕ್ಕೆ ಹೋಗುತ್ತಿರುವುದಾಗಿ ತಿಳಿಸಿ ಹೊರಟರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಳ್ಳಾರಿಯ ಮಾಡೆಲ್ ಹೌಸ್‌ಗೆ ಬೆಂಕಿ:ಆರು ಅಪ್ರಾಪ್ತರು ಸೇರಿದಂತೆ ಎಂಟು ಜನರು ಪೊಲೀಸರ ವಶಕ್ಕೆ
2025ರಲ್ಲಿ ಎಫ್‌ಡಿಐ ಹೂಡಿಕೆ ಶೇ.73ರಷ್ಟು ಭಾರೀ ಏರಿಕೆ! ₹4.2 ಲಕ್ಷ ಕೋಟಿ ಬಂಡವಾಳ ಹೂಡಿಕೆ