ತಮ್ಮವರ ಬಗ್ಗೆಯೇ ಅಸಮಾಧಾನ ಹೊರ ಹಾಕಿದ ಡಿಕೆಶಿ

Published : Aug 02, 2018, 09:31 AM IST
ತಮ್ಮವರ ಬಗ್ಗೆಯೇ ಅಸಮಾಧಾನ ಹೊರ ಹಾಕಿದ ಡಿಕೆಶಿ

ಸಾರಾಂಶ

ಯಾರು ಏನೇ ಮಾಡಲಿ ತಾವು ಪಕ್ಷಕ್ಕಾಗಿ ದುಡಿಯಲು ಸಿದ್ಧನಿದ್ದೇನೆ. ತಮ್ಮ ಬಗ್ಗೆ ಯಾವುದೇ ಭಾವನೆ ಇಟ್ಟುಕೊಂಡರೂ ತಲೆ ಕೆಡಿಸಿಕೊಳ್ಳುವುದಿಲ್ಲ ಜಲ ಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ. 

ಬೆಂಗಳೂರು :  ಪಕ್ಷ ಸಂಘಟನೆಗಾಗಿ ಶಕ್ತಿ ಮೀರಿ ದುಡಿದಿದ್ದರಿಂದ ಐಟಿ ದಾಳಿ ಸೇರಿ ಹಲವು ಕಿರುಕುಳ ಅನುಭವಿಸುವಾಗ ಡಿ.ಕೆ. ಶಿವಕುಮಾರ್ ಇನ್ನೂ ಅನುಭವಿಸ ಬೇಕು ಎಂದು ಖುಷಿ ಪಟ್ಟವರೂ ಇದ್ದಾರೆ. ಈ ಬಗ್ಗೆ ತಮಗೆ ಗೊತ್ತಿದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ಮಹಾನಗರ ಹಾಗೂ ಗ್ರಾಮಾಂತರ ಜಿಲ್ಲೆ ಯುವ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷರು, ಪದಾಧಿಕಾರಿಗಳು ನಗರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತರ ಸ್ಪೂರ್ತಿ ಸಮಾವೇಶದಲ್ಲಿ ಅವರು ಮಾತನಾಡಿದರು.

ಕೆಪಿಸಿಸಿ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ನೇಮಕಗೊಂಡಿದ್ದಾರೆ. ಕಾಂಗ್ರೆಸ್ ಪಕ್ಷಕ್ಕಾಗಿ ತಮ್ಮನ್ನು ಎಷ್ಟಾದರೂ ಬಳಸಿಕೊಳ್ಳಬಹುದು. ಪಕ್ಷಕ್ಕಾಗಿ ಸಾಮಾನ್ಯ ಕಾರ್ಯಕರ್ತನಂತೆ ದುಡಿಯಲು ತಾವು ಸದಾ ಸಿದ್ಧ. ಈ ಹಿಂದೆಯೂ ಶಕ್ತಿ ಮೀರಿ ಪಕ್ಷವನ್ನು ಉಳಿಸಿ ಬೆಳೆಸಲು ಕೆಲಸ ಮಾಡಿದ್ದೇನೆ. ಇದರ ಪರಿಣಾಮವಾಗಿ ಏನೇನು ಹಿಂಸೆ ಅನುಭವಿಸಬೇಕಾಯಿತು ಎಂಬುದು ಕಾರ್ಯಕತರಿಗೂ ಗೊತ್ತಿದೆ. ಯಾರು ಏನೇ ಮಾಡಲಿ ತಾವು ಪಕ್ಷಕ್ಕಾಗಿ ದುಡಿಯಲು ಸಿದ್ಧನಿದ್ದೇನೆ. ತಮ್ಮ ಬಗ್ಗೆ ಯಾವುದೇ ಭಾವನೆ ಇಟ್ಟುಕೊಂಡರೂ ತಲೆ ಕೆಡಿಸಿಕೊಳ್ಳುವುದಿಲ್ಲ.

ಪಕ್ಷ ಕಟ್ಟುವ ಸಲುವಾಗಿ ಎಂತಹ ಸಂದರ್ಭದಲ್ಲೂ ಎಲ್ಲ ರೀತಿಯ ಸಹಕಾರ ಕೊಡಲು ಸಿದ್ಧನಿದ್ದೇನೆ ಎಂದರು. ಭಿನ್ನಮತ ಸುದ್ದಿಗೆ ತೇಪೆ: ಈ ನಡುವೆ, ಕಾಂಗ್ರೆಸ್ಸಿನ ಸ್ಫೂರ್ತಿ ಸಮಾವೇಶದಲ್ಲಿ ಭಾಗವಹಿಸಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೆ ಡಿ.ಕೆ.ಶಿವಕುಮಾರ್ ಸನ್ಮಾನ ಮಾಡುವ ಮೂಲಕ ಭಿನ್ನಮತದ ಆರೋಪಕ್ಕೆ ತೆರೆ ಎಳೆಯಲು ಪ್ರಯತ್ನಿಸಿದ್ದಾರೆ ಎಂದು ತಿಳಿದು ಬಂದಿದೆ. 

ಕೆಪಿಸಿಸಿ ನೂತನ ಅಧ್ಯಕ್ಷರಾಗಿ ದಿನೇಶ್ ನೇಮಕಗೊಂಡ ಬಳಿಕ ಡಿಕೆಶಿಗೆ ಅಸಮಾಧಾನ ಉಂಟಾಗಿದೆ ಎಂದು ಚರ್ಚೆಯಾಗಿತ್ತು. ಈ ಕಾರಣಕ್ಕೆ ದಿನೇಶ್ ಅವರ ಯಾವ ಕಾರ್ಯಕ್ರಮಕ್ಕೂ ಶಿವಕುಮಾರ್ ಬಣ ಸಾಥ್ ನೀಡುತ್ತಿಲ್ಲ ಎನ್ನಲಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!