ಮುಂಬೈಯಲ್ಲಿ ಠಿಕಾಣಿ ಹೂಡಿರೋ ಶಾಸಕರಿಗೆ ಡಿಕೆಶಿ ವಾರ್ನಿಂಗ್

Published : Jul 18, 2019, 11:52 AM ISTUpdated : Jul 18, 2019, 12:02 PM IST
ಮುಂಬೈಯಲ್ಲಿ ಠಿಕಾಣಿ ಹೂಡಿರೋ ಶಾಸಕರಿಗೆ ಡಿಕೆಶಿ ವಾರ್ನಿಂಗ್

ಸಾರಾಂಶ

ವಿಶ್ವಾಸ ಮತ ಯಾಚನೆ ಬೆನ್ನಲ್ಲೇ ಡಿ ಕೆ ಶಿವಕುಮಾರ್ ವಾರ್ನಿಂಗ್ ರವಾನಿಸಿದ್ದಾರೆ. ಅತೃಪ್ತರಿಗೆ ಪರೋಕ್ಷ ಎಚ್ಚರಿಕೆ ನೀಡಿದ್ದಾರೆ. 

 
ಬೆಂಗಳೂರು [ಜು.18] : ಕರ್ನಾಟಕ ಸರ್ಕಾರಕ್ಕೆ ಇಂದು ಅಳಿವು ಉಳಿವಿನ ದಿನವಾಗಿದೆ. ಮುಖ್ಯಮಂತ್ರಿ ವಿಶ್ವಾಸ ಮತ ಯಾಚನೆಗೆ ಸಿದ್ಧರಾಗಿದ್ದಾರೆ. 

ಇದೇ ವೇಳೆ ಅತೃಪ್ತರಾಗಿ ಮುಂಬೈಗೆ ಹೋಗಿ ಕುಳಿತುಕೊಂಡಿರುವ ಶಾಸಕರಿಗೆ ಸಚಿವ ಡಿ.ಕೆ.ಶಿವಕುಮಾರ್ ವಾರ್ನಿಂಗ್ ನೀಡಿದ್ದಾರೆ. 

ಪರೋಕ್ಷವಾಗಿ ಅತೃಪ್ತ ಶಾಸಕರಿಗೆ ಅನರ್ಹತೆ ಬಗ್ಗೆ ಎಚ್ಚರಿಸಿದ್ದಾರೆ. ಕಾನೂನಾತ್ಮಕವಾಗಿ ವಿಪ್ ಜಾರಿಯಾಗಿದೆ, ವಿಶ್ವಾಸಮತ ಯಾಚನೆ ಇದ್ದು, ಎಲ್ಲರೂ ಬರುವ ನಂಬಿಕೆ ಇದೆ ಎಂದರು.

ಕರ್ನಾಟಕ ರಾಜಕೀಯದ ಹೆಚ್ಚಿನ ಸುದ್ದಿಗೆ ಇಲ್ಲಿ ಕ್ಲಿಕ್ಕಿಸಿ

ಇನ್ನು ನಮ್ಮಲ್ಲಿ ಅತೃಪ್ತತೆ ಯಾರಿಗೂ ಇಲ್ಲ. ಎಲ್ಲರೂ ನಮ್ಮವರೇ, ಕಾಂಗ್ರೆಸ್ ಕಟ್ಟಿ ಬೆಳೆಸಿದವರು. ಇಲ್ಲಿಯೇ ಗೆದ್ದವರು. ಆದ್ದರಿಂದ ಇಲ್ಲಿಯೇ ಇರುತ್ತಾರೆ ಎನ್ನುವ ನಂಬಿಕೆ ಇದೆ ಎಂದರು. 

ಎಲ್ಲಾ ಶಾಸಕರು ಬರುತ್ತಾರೆ ಎನ್ನುವ ವಿಶ್ವಾಸ ಇದೆ.ಯಾರೂ ಅವರ ಶಾಸಕ‌ ಸ್ಥಾನ‌ ಕಳೆದುಕೊಳ್ಳಲು  ಇಷ್ಟ ಪಡುವುದಿಲ್ಲ. ಮಂತ್ರಿ ಆಗಲು ಹೊರಟ ಅವರನ್ನು ನಾವೇ ಮಂತ್ರಿ ಮಾಡುತ್ತೇವೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಎಂ, ಡಿಸಿಎಂ ನಡುವೆ ಬೂದಿ ಮುಚ್ಚಿದ ಕೆಂಡದ ಪರಿಸ್ಥಿತಿ: ಸಂಸದ ಜಗದೀಶ್ ಶೆಟ್ಟರ್
ಗೆಳೆಯರ ಜೊತೆ ಟ್ರಿಪ್ ಹೋಗಿದ್ದ ಬೆಂಗಳೂರು ನಿವಾಸಿ ಗೋವಾ ನೈಟ್ ಕ್ಲಬ್ ದುರಂತದಲ್ಲಿ ಮೃತ