
ಬೆಂಗಳೂರು : ನೈಸ್ ಅಕ್ರಮದ ರೋಪ ಎದುರಿಸುತ್ತಿರುವ ಅಶೋಕ್ ಖೇಣಿ ಇಂದು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಖೇಣಿ ಅಕ್ರಮಕ್ಕೂ – ಅವರು ಕಾಂಗ್ರೆಸ್ ಸೇರುತ್ತಿರುವುದಕ್ಕೂ ಸಂಬಂಧವಿಲ್ಲ. ರಾಜಕೀಯ ಬೇರೆ, ಅವರ ವ್ಯವಹಾರ ಬೇರೆ. ರಾಜಕೀಯ ದೃಷ್ಟಿಯಲ್ಲಿ ಮಾತ್ರವೇ ಖೇಣಿ ಕಾಂಗ್ರೆಸ್ ಸೇರಲು ಬಯಸಿರುವುದನ್ನು ಸ್ವಾಗತಿಸುತ್ತೇವೆ ಎಂದು ಡಿಕೆ ಶಿವಕುಮಾರ್ ಹೇಳಿದರು.
ಅವರ ವೈಯಕ್ತಿಕ ವಿಚಾರಗಳು ಯಾವವು ಕೂಡ ಪಕ್ಷಕ್ಕೆ ಸಂಬಂಧಿಸಿಲ್ಲ. ಖೇಣಿ ಶಾಸಕರಾಗುವ ಮೊದಲೇ ನೈಸ್ ಪ್ರಾರಂಭ ಮಾಡಿದ್ದು, ಈ ಯೋಜನೆಗೆ ದೇವೇಗೌಡರು ಹಾಗೂ ಜೆಎಚ್ ಪಟೇಲ್ ಅವರು ಸಹಿ ಹಾಕಿದ್ದರು. ನೈಸ್’ನಲ್ಲಿ ಅಕ್ರಮಗಳು ನಡೆದಿದ್ದರೆ ಅದನ್ನು ಕಾಂಗ್ರೆಸ್ ಬೆಂಬಲಿಸುವುದಿಲ್ಲ ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.