
ಬೆಂಗಳೂರು: ಇಂಧನ ಸಚಿವ ಡಿ. ಕೆ. ಶಿವಕುಮಾರ್ ಪ್ರತಿನಿಧಿಸುವ ಕನಕಪುರ ಕ್ಷೇತ್ರಕ್ಕೆ ಪ್ರಬಲ ಅಭ್ಯರ್ಥಿ ಯನ್ನು ಕಣಕ್ಕೆ ಇಳಿಸಲು ಜೆಡಿಎಸ್ ನಿರ್ಧರಿಸುತ್ತಿದ್ದಂತೆಯೇ ಚನ್ನಪಟ್ಟಣದ ಕಣ ಪ್ರವೇಶಿಸಲು ಸಂಸದ ಡಿ.ಕೆ.ಸುರೇಶ್ ಸಜ್ಜಾಗಿದ್ದಾರೆ.
ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ಗೆ ಕೈ ಕೊಟ್ಟ ಸಿ.ಪಿ. ಯೋಗೇಶ್ವರ್ ಬಿಜೆಪಿ ಸೇರುತ್ತಿದ್ದಂತೆಯೇ ಅವರನ್ನು ಮಣಿಸಲು ಹಳೆಯ ಶತ್ರುಗಳಾದ ಶಿವಕುಮಾರ್ ಹಾಗೂ ಜೆಡಿಎಸ್ನ ಕುಮಾರಸ್ವಾಮಿ ಹತ್ತಿರವಾಗಿದ್ದರು.
ಈ ಬಗ್ಗೆ ಅವರ ನಡುವೆ ಮಾತುಕತೆಯೂ ನಡೆದಿತ್ತು. ಅದರ ಪ್ರಕಾರ ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ಸ್ಪರ್ಧಿಸಿದರೆ, ಯೋಗೇಶ್ವರ್ ಬೆಂಬಲಿಗರೊಬ್ಬರನ್ನು ಕಾಂಗ್ರೆಸ್ಗೆ ಸೆಳೆದು ಅವರಿಗೆ ಟಿಕೆಟ್ ನೀಡುವ ಮೂಲಕ ಜೆಡಿಎಸ್ಗೆ ಕಾಂಗ್ರೆಸ್ ಸಹಕರಿಸಲು ಮತ್ತು ಅದಕ್ಕೆ ಪರ್ಯಾಯವಾಗಿ ಕನಕಪುರ ಸೇರಿದಂತೆ ಕೆಲ ಕ್ಷೇತ್ರಗಳಲ್ಲಿ ದುರ್ಬಲ ಅಭ್ಯರ್ಥಿ ಕಣಕ್ಕಿಳಿಸುವ ಮೂಲಕ ಸಹಕರಿಸಬೇಕು ಎಂಬುದು ಮಾತುಕತೆಯ ತಿರುಳು.
ಆದರೆ, ಇದಕ್ಕೆ ಜೆಡಿಎಸ್ ಸೊಪ್ಪು ಹಾಕಿದಂತೆ ಕಂಡು ಬಂದಿಲ್ಲ. ಹೀಗಾಗಿ ಡಿ.ಕೆ. ಸುರೇಶ್ ಅವರು ಚನ್ನಪಟ್ಟಣ ಕ್ಷೇತ್ರದಿಂದ ಅದೃಷ್ಟ ಪರೀಕ್ಷೆ ನಡೆಸಲು ಸಜ್ಜಾಗಿದ್ದಾರೆ ಎಂದು ಮೂಲಗಳು ಹೇಳುತ್ತವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.