ಕಾಂಗ್ರೆಸ್ ಅಧ್ಯಕ್ಷ ಸ್ಥಾನ: ಹಿರಿಯ ನಾಯಕರಿಗೆ ಟಾಂಗ್ ಕೊಟ್ಟ ಸಚಿವ ಡಿಕೆಶಿ !

Published : May 03, 2017, 11:57 AM ISTUpdated : Apr 11, 2018, 12:55 PM IST
ಕಾಂಗ್ರೆಸ್ ಅಧ್ಯಕ್ಷ ಸ್ಥಾನ: ಹಿರಿಯ ನಾಯಕರಿಗೆ ಟಾಂಗ್ ಕೊಟ್ಟ ಸಚಿವ ಡಿಕೆಶಿ !

ಸಾರಾಂಶ

ಸಿಎಂ ಪಕ್ಷದ ಹಿರಿಯ ನಾಯಕರಾದ ಪರಮೇಶ್ವರ್, ಖರ್ಗೆ, ಆಸ್ಕರ್ ಎಲ್ಲರೂ ಒಪ್ಪಿದರೆ ಅಧ್ಯಕ್ಷ ಸ್ಥಾನ ಒಪ್ಪುವೆ’. ‘ಪಕ್ಷ ಈ ಹಿಂದೆ ಕೊಟ್ಟ ಎಲ್ಲ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿಭಾಯಿಸಿದ್ದೇನೆ’.

ನವದೆಹಲಿ(ಮೇ.03): ಕಾಂಗ್ರೆಸ್ ಹಿರಿಯ ನಾಯಕರಿಗೆ ಟಾಂಗ್ ಕೊಟ್ಟಿರುವ ಇಂಧನ ಸಚಿವ ಡಿ.ಕೆ. ಶಿವಕುಮಾರ್ 'ನಿರುದ್ಯೋಗಿಗಳು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಅರ್ಜಿ ಹಾಕಿ ಪಡೆಯುವುದು ಸಾಧ್ಯವಿಲ್ಲ' ಎಂದು ಹೇಳಿದ್ದಾರೆ.

ಅಮೆರಿಕಾ ಪ್ರವಾಸದಿಂದ ನೇರವಾಗಿ ದೆಹಲಿಗೆ ಬಂದಿಳಿದು ಸುದ್ದಿಗಾರರರೊಂದಿಗೆ ಮಾತನಾಡಿದ ಸಚಿವರು, ‘ಸಿಎಂ ಪಕ್ಷದ ಹಿರಿಯ ನಾಯಕರಾದ ಪರಮೇಶ್ವರ್, ಖರ್ಗೆ, ಆಸ್ಕರ್ ಎಲ್ಲರೂ ಒಪ್ಪಿದರೆ ಅಧ್ಯಕ್ಷ ಸ್ಥಾನ ಒಪ್ಪುವೆ’. ‘ಪಕ್ಷ ಈ ಹಿಂದೆ ಕೊಟ್ಟ ಎಲ್ಲ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿಭಾಯಿಸಿದ್ದೇನೆ’. ‘ಈಗಲೂ ಅಧ್ಯಕ್ಷ ಸ್ಥಾನದ ಜವಾಬ್ದಾರಿ ಕೊಟ್ಟರೆ ಸಮರ್ಥವಾಗಿ ನಿರ್ವಹಿಸುವೆ’ಎಂದು ತಾವು ಕೂಡ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿ ಎಂದು ಪರೋಕ್ಷವಾಗಿ ತಿಳಿಸಿದರು.

‘ಸಿಎಂ ಸಿದ್ದರಾಮಯ್ಯ ಮತ್ತು ನನ್ನ ನಡುವೆ ಯಾವುದೇ ಅಸಮಾಧಾನ ಇದೆ ಅನ್ನೋದು ಗಾಳಿ ಸುದ್ದಿ’. ನಾವಿಬ್ಬರು ಆತ್ಮೀಯವಾಗಿದ್ದೇವೆ'ಎಂದರು. ದೆಹಲಿಯಲ್ಲಿ ಬೀಡುಬಿಟ್ಟಿರುವ ಸಚಿವರು ರಾಜ್ಯದ ನೂತನ ಉಸ್ತುವಾರಿ ವೇಣುಗೋಪಾಲ್ ಅವರನ್ನು ಭೇಟಿ ಮಾಡಲಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೆಹಂದಿ ಗಿಡ ಪೂಜಿಸಿದರೆ ಇಷ್ಟೆಲ್ಲಾ ಲಾಭವಿದೆಯೇ?: ಪೂಜೆಗೆ ಇದೇ ಸರಿಯಾದ ದಿನ!
Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!