
ಚನ್ನಪಟ್ಟಣ(ನ.07): ಹೈಕಮಾಂಡ್ ಬಯಸಿದರೆ ತಾನು ಚೆನ್ನಪಟ್ಟಣದಿಂದ ಮುಂದಿನ ಚುನಾವಣೆಗೆ ಅಭ್ಯರ್ಥಿಯಾಗಲು ಸಿದ್ಧ ಎಂದು ಸಂಸದ ಡಿ.ಕೆ. ಸುರೇಶ್ ಪ್ರಕಟಿಸಿದ್ದಾರೆ.
ಪಟ್ಟಣದಲ್ಲಿ ತಾಲೂಕು ಕಾಂಗ್ರೆಸ್ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಇಲ್ಲಿಂದ ಸ್ಪರ್ಧಿಸಲಿ ಎಂಬ ಶಾಸಕ ಯೋಗೇಶ್ವರ್ ಅವರ ಸವಾಲಿಗೆ ತಮ್ಮ ಕಾರ್ಯಕರ್ತರೇ ಉತ್ತರ ನೀಡುತ್ತಾರೆ ಎಂದರು. ಯೋಗೇಶ್ವರ್ ಅವರಿಗೆ ಮೇ ತಿಂಗಳಲ್ಲಿ ನಡೆಯಲಿರುವ ಚುನಾವಣೆ ತಕ್ಕ ಪಾಠ ಕಲಿಸುತ್ತದೆ. ನಾನು ಮತ್ತು ನನ್ನ ಸಹೋದರ ಡಿ.ಕೆ. ಶಿವಕುಮಾರ್ ಕಾಂಗ್ರೆಸ್ ಪಕ್ಷಕ್ಕೆ ಬದ್ಧವಾಗಿದ್ದೇವೆ. ಪಕ್ಷದ ತೀರ್ಮಾನವನ್ನು ನಾವು ಪಾಲಿಸುತ್ತೇವೆ ಎಂದು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.