
ಬೆಂಗಳೂರು(ಜ.10): ಕಾಂಗ್ರೆಸ್ ಪಕ್ಷದತ್ತ ಇಬ್ಬರು ಪ್ರಮುಖ ಚಿತ್ರನಟರು ಮುಖ ಮಾಡುವ ಸಾಧ್ಯತೆಯಿದೆ. ಕನಸಿನ ರಾಣಿ ಎಂದೇ ಖ್ಯಾತರಾಗಿರುವ ನಾಯಕನಟಿ ಮಾಲಾಶ್ರೀ ಹಾಗೂ ಹಾಸ್ಯ ಕಲಾವಿದ ಸಾಧು ಕೋಕಿಲಾ ಹಸ್ತ ಪಕ್ಷಕ್ಕೆ ಕೈ ಚಾಚಲಿದ್ದಾರೆ ಎನ್ನುತ್ತವೆ ಮೂಲಗಳು.
ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷರು ಆಗಿರುವ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಈ ಇಬ್ಬರೂ ನಟರು ಇಂದು ಭೇಟಿ ಮಾಡಿದ್ದು ಅರ್ಧ ಗಂಟೆಗೂ ಹೆಚ್ಚು ಕಾಲ ಚರ್ಚಿಸಿದ್ದಾರೆ ಎನ್ನಲಾಗಿದೆ. ಇವರಿಬ್ಬರನ್ನು ಸ್ಟಾರ್ ಕ್ಯಾಂಪೇನರ್ ಆಗಿ ಬಳಸುವ ಸಾಧ್ಯತೆಯಿದೆ. ಡಿ.ಕೆ. ಶಿವಕುಮಾರ್ ಆಯೋಜಿಸಲಿರುವ ಕನಕೋತ್ಸವ ಕಾರ್ಯಕ್ರಮದಲ್ಲೂ ಸಾಧುಕೋಕಿಲ ಮತ್ತು ಮಾಲಾಶ್ರೀ ಭಾಗಿಯಾಗಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.