
ಬೆಂಗಳೂರು(ಆ.03): ಇಂಧನ ಸಚಿವ ಡಿ.ಕೆ.ಶಿವಕುಮಾರ್ ತಾಯಿ ಗೌರಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಕ್ಷರಶಃ ಗುಡುಗಿದ್ದಾರೆ.
ಮಾಧ್ಯಮವೊಂದರ ಸಂದರ್ಶನದಲ್ಲಿ ಮಾತನಾಡಿದ ಅವರು ತಮ್ಮ ಇಬ್ಬರು ಮಕ್ಕಳ ಬೆಂಬಲಕ್ಕೆ ಸಿಎಂ ಸಿದ್ದರಾಮಯ್ಯ ನಿಂತಿಲ್ಲ. ನನ್ನ ಮಗನ ಮನೆ ಮೇಲೆ ದಾಳಿಯಾದಾಗ ಸಿದ್ದರಾಮಯ್ಯ ಯಾಕೆ ಪ್ರಶ್ನೆ ಮಾಡಲಿಲ್ಲ. ದಾಳಿ ಆದ್ಮೇಲೆ ಬಂದು ಮಾತಾಡಿ ನಾಟಕವಾಡಿದ್ರೆ ನಮಗೆ ಗೊತ್ತಾಗಲ್ವಾ..? ಸಿದ್ದರಾಮಯ್ಯನವರೇ ನಮ್ಮ ಮಕ್ಕಳ ವಿರುದ್ಧ ಕತ್ತಿ ಮಸೆಯುತ್ತಿದ್ದಾರೆ
ನನ್ನ ಮಕ್ಕಳಿಂದಲೇ ಇವತ್ತು ಸಿದ್ದರಾಮಯ್ಯ ಸಿಎಂ ಆಗಿದ್ದಾರೆ. ಸಿದ್ದರಾಮಯ್ಯ ನಂಬಿಸಿ ಕುತ್ತಿಗೆ ಕುಯ್ಯುವ ಕೆಲಸ ಮಾಡುತ್ತಿದ್ದಾರೆ. ನನ್ನ ಮಕ್ಕಳ ಇಂದಿನ ಸ್ಥಿತಿಗೆ ಸಿದ್ದರಾಮಯ್ಯ ಅವರೇ ಕಾರಣ' ಎಂದು ಆಕ್ರೋಶ ವ್ಯಕ್ತಪಡಿಸಿದರು.
ನನ್ನ ಮಕ್ಕಳು ತಪ್ಪು ಮಾಡಿಲ್ಲ, ಜನರಿಗಾಗಿ ಮನೆಯವರನ್ನೆಲ್ಲ ಬಿಟ್ಟು ದುಡಿಯುತ್ತಿದ್ದಾರೆ. ನನ್ನ ಮಗ ಮುಖ್ಯಮಂತ್ರಿಯಾಗ್ತಾನೆ ಅಂತ ಹೀಗೆಲ್ಲಾ ಮಾಡಲಾಗುತ್ತಿದೆ. ನನ್ನ ಮಕ್ಕಳನ್ನು ಕಂಡರೆ ಪಕ್ಷದಲ್ಲಿರುವ ಕೆಲ ಮಂತ್ರಿಗಳು ಅಸೂಯೆ ಪಡುತ್ತಾರೆ. ಸಿದ್ದರಾಮಯ್ಯ ಅವರು ಘೋಷಿಸಿರುವ ಭಾಗ್ಯಗಳಲ್ಲ ಅವರ ಮನೆಯಿಂದ ತಂದದ್ದಲ್ಲ ರೈತರದು' ಎಂದು ಸಿಎಂ ವಿರುದ್ಧ ಕಿಡಿ ಕಾರಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.