
ರಾಯಚೂರು(ಆ.12): ಚಿತ್ರನಟ ಉಪೇಂದ್ರ ಅವರ ರಾಜಕೀಯ ಪ್ರವೇಶಕ್ಕೆ ಸಂಪೂರ್ಣ ಸ್ವಾಗತ. ಜಾತ್ಯತೀತ ತತ್ವದಡಿ ಎಲ್ಲ ವರ್ಗದವರನ್ನು ಸೇರಿಸಿಕೊಂಡು ಪಕ್ಷ ಕಟ್ಟಲಿ ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ ಹೇಳಿದರು.
ತಾಲೂಕಿನ ಶಕ್ತಿನಗರದ ಅತಿಥಿ ಗೃಹದಲ್ಲಿ ಸುದ್ದಿಗಾರರೊಂದಿಗೆ ಶನಿವಾರ ಮಾತನಾಡಿ, ಇಷ್ಟು ದಿನ ಬಣ್ಣ ಹಚ್ಚಿಕೊಂಡು ಸಿನಿಮಾ ಮಾಡುತ್ತಿದ್ದ ಉಪೇಂದ್ರ ಬಣ್ಣ ಹಚ್ಚದೇ ರಾಜಕೀಯ ಮಾಡಲಿ, ರಾಜಕೀಯ ಮೂಲಕ ಜನರ ಸೇವೆ ಮಾಡುವ ಅವರ ನಿರ್ಧಾರವನ್ನು ಸಂಪೂರ್ಣ ಸ್ವಾಗತಿಸಿ ಯಶಸ್ಸು ಸಿಗಲಿ ಎಂದು ಶುಭಕೋರುವೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.