ಕೊಲ್ಲೂರಿನಲ್ಲಿ ಸಚಿವ ಡಿಕೆಶಿ ಶತಚಂಡಿಕಾ ಯಾಗ

Published : Jan 07, 2018, 01:26 PM ISTUpdated : Apr 11, 2018, 12:45 PM IST
ಕೊಲ್ಲೂರಿನಲ್ಲಿ ಸಚಿವ ಡಿಕೆಶಿ ಶತಚಂಡಿಕಾ ಯಾಗ

ಸಾರಾಂಶ

ಸಚಿವ ಡಿ.ಕೆ.ಶಿವಕುಮಾರ್ ಮತ್ತು ಅವರ ಕುಟುಂಬದವರು ಶನಿವಾರ ರಾತ್ರಿ ಕುಂದಾಪುರದ ಖಾಸಗಿ ಐಷಾರಾಮಿ ಹೋಟೆಲ್‌ನಲ್ಲಿ ಉಳಿದುಕೊಂಡಿದ್ದಾರೆ.

ಕುಂದಾಪುರ(ಜ.07): ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರು ಶನಿವಾರ ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಿ ಶತಚಂಡಿಕಾಯಾಗಕ್ಕೆ ಸಂಕಲ್ಪ ಪೂಜೆ ನೆರವೇರಿಸಿದ್ದು, ಸೋಮವಾರ ಬೆಳಗ್ಗೆ ಈ ಯಾಗದ ಪೂರ್ಣಾಹುತಿ ನಡೆಯಲಿದೆ.

ಸಚಿವ ಡಿ.ಕೆ.ಶಿವಕುಮಾರ್ ಮತ್ತು ಅವರ ಕುಟುಂಬದವರು ಶನಿವಾರ ರಾತ್ರಿ ಕುಂದಾಪುರದ ಖಾಸಗಿ ಐಷಾರಾಮಿ ಹೋಟೆಲ್‌ನಲ್ಲಿ ಉಳಿದುಕೊಂಡಿದ್ದಾರೆ. ಭಾನುವಾರವೂ ಇಲ್ಲೇ ಕಳೆದು, ಸೋಮವಾರ ಬೆಳಗ್ಗೆ ಮತ್ತೆ ಕೊಲ್ಲೂರಿಗೆ ಭೇಟಿ ನೀಡಿ ಶತಚಂಡಿಕಾಯಾಗದ ಪೂರ್ಣಾಹುತಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಬೈಂದೂರಿನಲ್ಲಿ ನಡೆಯಲಿರುವ ಮುಖ್ಯಮಂತ್ರಿ ಸಿದ್ದರಾಮಯಯ್ಯ ಅವರ ಸಾಧನಾ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು ಕೂಡಾ ಭಾನುವಾರ ಕೊಲ್ಲೂರಿಗೆ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

10 ದಿನ ನಡೆದ ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ತೆರೆ
ಗ್ಯಾರಂಟಿಯಿಂದಾಗಿ ತಲಾ ಆದಾಯದಲ್ಲಿ ರಾಜ್ಯ ನಂ.1 : ಸಿದ್ದರಾಮಯ್ಯ