ಶಾಸಕ ಯೋಗೀಶ್ವರ್ ದ್ರೋಹ ಮಾಡಲ್ಲ: ಡಿಕೆಶಿ

Published : Sep 26, 2017, 09:24 PM ISTUpdated : Apr 11, 2018, 01:07 PM IST
ಶಾಸಕ ಯೋಗೀಶ್ವರ್ ದ್ರೋಹ ಮಾಡಲ್ಲ: ಡಿಕೆಶಿ

ಸಾರಾಂಶ

ನಮ್ಮ ಪಕ್ಷವನ್ನ ಯಾರೂ ಸಹ ಅಷ್ಟು ಸಲೀಸಾಗಿ ಬಿಟ್ಟು ಹೋಗಲ್ಲ. ಚನ್ನಪಟ್ಟಣ ಶಾಸಕ ಸಿ.ಪಿ ಯೋಗೇಶ್ವರ್‌ಗೆ ಬಹಳ ಸಹಕಾರ ನೀಡಿದ್ದು ಅವರ ನೀರಾವರಿ ಅಭಿವೃದ್ಧಿ ಕೆಲಸಗಳಿಗೆ ಹಣ ಬಿಡುಗಡೆ ಮಾಡಿದೆ.

ಕನಕಪುರ(ಸೆ.26): ಚನ್ನಪಟ್ಟಣ ಶಾಸಕ ಸಿ.ಪಿ ಯೋಗೇಶ್ವರ್ ಕಾಂಗ್ರೇಸ್ ಪಕ್ಷಕ್ಕೆ ಯಾವುದೇ ಕಾರಣಕ್ಕೂ ದ್ರೋಹ ಮಾಡಲ್ಲ. ಬಿಜೆಪಿಗೆ ಸೇರ್ಪಡೆಯಾಗ್ತಾರೆ ಅನ್ನೋದು ಕೇವಲ ಊಹಾಪೋಹಾ ಅಷ್ಟೇ ಎಂದು ಇಂಧನ ಸಚಿವ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

ತಾಲ್ಲೂಕಿನ ಮಾವತ್ತೂರು ಗ್ರಾಮದ ಕೆರೆಗೆ ಬಾಗೀನ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಮಾತನಾಡಿದರು. ನಮ್ಮ ಪಕ್ಷವನ್ನ ಯಾರೂ ಸಹ ಅಷ್ಟು ಸಲೀಸಾಗಿ ಬಿಟ್ಟು ಹೋಗಲ್ಲ. ಚನ್ನಪಟ್ಟಣ ಶಾಸಕ ಸಿ.ಪಿ ಯೋಗೇಶ್ವರ್‌ಗೆ ಬಹಳ ಸಹಕಾರ ನೀಡಿದ್ದು ಅವರ ನೀರಾವರಿ ಅಭಿವೃದ್ಧಿ ಕೆಲಸಗಳಿಗೆ ಹಣ ಬಿಡುಗಡೆ ಮಾಡಿದೆ. ಅವರು ಹೇಳಿದವರಿಗೆ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್‌ಗಳಲ್ಲಿ ಟಿಕೆಟ್ ಸಹ ನೀಡಿದ್ದು ಸರ್ಕಾರ ಬೆಂಬಲವಾಗಿ ನಿಂತಿದೆ. ಅವರು ಯಾವುದೆ ಕಾರಣಕ್ಕೂ ಕಾಂಗ್ರೆಸ್ ಪಕ್ಷಕ್ಕೆ ದ್ರೋಹ ಮಾಡಲ್ಲ. ಇದೆಲ್ಲ ಮಾಧ್ಯಮಗಳ ಊಹಾಪೋಹಾ ಎಂದು ತಿಳಿಸಿದರು.

ಬರಗಾಲದಿಂದ ಕಳೆದ 5 ವರ್ಷಗಳಿಂದ ಭರ್ತಿಯಾಗದಿದ್ದ 153 ಎಕರೆ ವಿಸ್ತೀರ್ಣದ ದೊಡ್ಡಕೆರೆ ಈ ಬಾರಿಯ ಉತ್ತಮ ಮಳೆಗೆ ಕೋಡಿ ಹೊಡೆದಿದ್ದು, ಈ ಹಿನ್ನೆಲೆಯಲ್ಲಿ ಇಂದು ಕೆರೆಗೆ ಬಾಗೀನ ಅರ್ಪಿಸಲಾಯಿತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕನ್ನಡ ಭಾಷೆ ಕಲಿಸದ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ: ಸಚಿವ ಮಧು ಬಂಗಾರಪ್ಪ
ಹೆಣ್ಣು ಭ್ರೂಣ ಹತ್ಯೆ ತಡೆಗೆ ಪ್ರತಿ ಜಿಲ್ಲೆಗೆ ನೋಡಲ್‌ ಅಧಿಕಾರಿ ನೇಮಕ: ಸಚಿವ ದಿನೇಶ್‌ ಗುಂಡೂರಾವ್‌