
ಬೆಂಗಳೂರು(ಅ.06): ಬಹುನಿರೀಕ್ಷಿತ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಪುತ್ರ ನಿಖಿಲ್ ಅಭಿನಯದ ಜಾಗ್ವಾರ್ ಸಿನಿಮಾ ತೆರೆ ಕಂಡಿದೆ. ಮಾಜಿ ಪ್ರಧಾನಿ ದೇವೇಗೌಡರು, ಕುಮಾರಸ್ವಾಮಿ ವಂಶದ ಕುಡಿಯ ಸಿನಿಮಾ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಇತ್ತ, ನಿಖಿಲ್ ಅಭಿನಯದ ‘ಜಾಗ್ವಾರ್’ ಸಿನಿಮಾಗೆ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಸಹ ಶುಭ ಹಾರೈಸಿದ್ದಾರೆ. ನಿಖಿಲ್ ಗೌಡರು ನಟನೆಯಿಂದ ಹೆಚ್ಚಿನ ಅಭಿಮಾನಿಗಳನ್ನ ಗಳಿಸಲಿ, ಅವರು ಸಿನಿಮಾ ರಂಗದ ಮೂಲಕ ನಾಡಿನ ಸೇವೆ ಮಾಡಲಿ. ಸಿನಿಮಾ ನಂತರ ರಾಜಕಾರಣಕ್ಕೆ ಬರಬಹುದು. ನಿಖಿಲ್ ಸಿನಿಮಾಗೆ ಯಶಸ್ಸು ಸಿಗಲಿ ಎಂದು ಡಿ.ಕೆ. ಶಿವಕುಮಾರ್ ಹಾರೈಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.