ರಾಜ್ಯಸಭೆಗೆ ಮನಮೋಹನ್ ಸಿಂಗ್ ಕಳುಹಿಸಲು ಡಿಎಂಕೆ ನಕಾರ!

Published : Jul 02, 2019, 08:16 AM IST
ರಾಜ್ಯಸಭೆಗೆ ಮನಮೋಹನ್ ಸಿಂಗ್ ಕಳುಹಿಸಲು ಡಿಎಂಕೆ ನಕಾರ!

ಸಾರಾಂಶ

ತ.ನಾಡಿಂದ ರಾಜ್ಯಸಭೆಗೆ ಮನಮೋಹನ ಸಿಂಗ್‌ ಕಳಿಸಲು ಡಿಎಂಕೆ ನಕಾರ| ರಾಜಸ್ಥಾನದಿಂದ ಮಾಜಿ ಪ್ರಧಾನಿ ಆಯ್ಕೆ ಸಂಭವ

ಚೆನ್ನೈ[ಜು.02]: ಮಾಜಿ ಪ್ರಧಾನಿ ಮನಮೋಹನ ಸಿಂಗ್‌ ಅವರನ್ನು ತಮಿಳುನಾಡಿನಿಂದ ರಾಜ್ಯಸಭೆಗೆ ಕಳುಹಿಸುವಂತೆ ಕಾಂಗ್ರೆಸ್‌ ಇಟ್ಟಿದ್ದ ಕೋರಿಕೆಯನ್ನು ಮಿತ್ರ ಪಕ್ಷ ಡಿಎಂಕೆ ತಿರಸ್ಕರಿಸಿದೆ. ಇದರಿಂದಾಗಿ ಮನಮೋಹನ್‌ ಅವರು ರಾಜಸ್ಥಾನದಿಂದ ಆಯ್ಕೆಯಾಗುವ ಸಂಭವವಿದೆ.

ತಮಿಳುನಾಡಿನಲ್ಲಿ ತೆರವಾಗಿರುವ 6 ರಾಜ್ಯಸಭೆ ಸ್ಥಾನಗಳಿಗೆ ಜು.18ರಂದು ಚುನಾವಣೆ ನಡೆಯಲಿದೆ. ಈ ಪೈಕಿ 3 ಸ್ಥಾನ ಗೆಲ್ಲಲು ಡಿಎಂಕೆಗೆ ಸಾಧ್ಯವಿದೆ. ಲೋಕಸಭೆ ಚುನಾವಣಾಪೂರ್ವದಲ್ಲಿ ಮಾಡಿಕೊಂಡಿದ್ದ ಮೈತ್ರಿಯಂತೆ ಒಂದು ಸ್ಥಾನವನ್ನು ವೈಕೋ ನೇತೃತ್ವದ ಎಂಡಿಎಂಕೆಗೆ ಬಿಟ್ಟುಕೊಟ್ಟಿರುವ ಡಿಎಂಕೆ, ಉಳಿದ ಎರಡು ಸ್ಥಾನಗಳಿಗೆ ತನ್ನ ಮುಖಂಡರಿಗೆ ಟಿಕೆಟ್‌ ನೀಡಿದೆ. ಇದರಿಂದಾಗಿ ಮನಮೋಹನ ಸಿಂಗ್‌ ಆಯ್ಕೆಯಾಗದಂತಾಗಿದೆ.

ರಾಜಸ್ಥಾನ ಬಿಜೆಪಿ ಅಧ್ಯಕ್ಷ ಹಾಗೂ ರಾಜ್ಯಸಭೆ ಸದಸ್ಯರಾಗಿದ್ದ ಲಾಲ್‌ ಸೈನಿ ಅವರು ಇತ್ತೀಚೆಗೆ ನಿಧನರಾಗಿದ್ದಾರೆ. ಅವರಿಂದ ತೆರವಾಗಿರುವ ರಾಜ್ಯಸಭೆ ಸ್ಥಾನಕ್ಕೆ ಕಾಂಗ್ರೆಸ್‌ ಪಕ್ಷ ಮನಮೋಹನ ಸಿಂಗ್‌ ಅವರನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ. ರಾಜಸ್ಥಾನದಲ್ಲಿ ಕಾಂಗ್ರೆಸ್‌ ಬಹುಮತ ಹೊಂದಿರುವುದರಿಂದ ಸಿಂಗ್‌ ಅವರ ಆಯ್ಕೆಗೆ ಸಮಸ್ಯೆ ಇಲ್ಲ ಎನ್ನಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರು ವಿಜಯ್ ಗುರೂಜಿ ಗ್ಯಾಂಗ್ ಸಮೇತ ಅರೆಸ್ಟ್; ಟೆಕ್ಕಿಗೆ ಲೈಂಗಿಕ ಶಕ್ತಿ ಹೆಚ್ಚಿಸೋದಾಗಿ ₹40 ಲಕ್ಷ ವಂಚನೆ!
ರಕ್ಷಿಸಲು ಹೋದವನನ್ನೇ ಕೆಳಗೆ ತಳ್ಳಿದ ಮಾನಸಿಕ ಅಸ್ವಸ್ಥ: ಜೀವ ಉಳಿಸಲು ಹೋಗಿ ಕೈಕಾಲು ಮುರಿದುಕೊಂಡ ಯುವಕ