
ಚೆನ್ನೈ: ತಮಿಳುನಾಡು ಮಾಜಿ ಸಿಎಂ ಕರುಣಾನಿಧಿ ಅಂತ್ಯ ಸಂಸ್ಕಾರಕ್ಕೆ ಜಾಗ ನೀಡುವ ವಿಚಾರಕ್ಕೆ ಸಂಬಂಧಿಸಿದ ಆರು ಅರ್ಜಿಗಳನ್ನು ಮದ್ರಾಸ್ ಹೈ ಕೋರ್ಟ್ ವಜಾ ಮಾಡಿದೆ.
ಅರ್ಜಿದಾರರು ಮರೀನಾ ಬೀಚ್ ನಲ್ಲಿ ಅಂತ್ಯಸಂಸ್ಕಾರ ನಡೆಸಲು ತಮ್ಮ ಯಾವುದೇ ವಿರೋಧ ವಿಲ್ಲ ಎಂದು ಹೇಳಿದ್ದು ಈ ನಿಟ್ಟಿನಲ್ಲಿ ಕೋರ್ಟ್ ಅರ್ಜಿ ವಾಪಸ್ ಪಡೆಯಲು ಸೂಚಿಸಿತ್ತು. ಖಾಸಗಿ ಅರ್ಜಿ ದಾರರಿಂದ ಆಕ್ಷೇಪ ಇಲ್ಲದ ಹಿನ್ನೆಲೆಯಲ್ಲಿ ಸದ್ಯ ಅರ್ಜಿಗಳನ್ನು ಕೋರ್ಟ್ ವಜಾ ಮಾಡಿದೆ.
ಮರೀನಾ ಬೀಚ್ನಲ್ಲಿ ಅಂತ್ಯ ಸಂಸ್ಕಾರ ನಡೆಸಲು ಅವಕಾಶ ನೀಡಬೇಕು ಎಂದು ಕೋರಿ ಡಿಎಂಕೆ ಪಕ್ಷವು ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿತ್ತು. ಹಂಗಾಮಿ ಮುಖ್ಯ ನ್ಯಾಯಮೂರ್ತಿ ಹುಲುವಾಡಿ ಜಿ. ರಮೇಶ್, ಮಂಗಳವಾರ ರಾತ್ರಿಯೇ ಈ ಅರ್ಜಿಯ ವಿಚಾರಣೆ ನಡೆಸಲು ಒಪ್ಪಿಕೊಂಡಿದ್ದರು.
ವಿಚಾರಣೆ ಆರಂಭವಾಗುತ್ತಿದ್ದಂತೆ, ಮರೀನಾ ಬೀಚ್ನಲ್ಲಿ ಅಂತ್ಯಸಂಸ್ಕಾರ ನಡೆಸುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಸಲ್ಲಿಸಲಾಗಿದ್ದ ಎಲ್ಲಾ 5 ಅರ್ಜಿಗಳನ್ನು ಅರ್ಜಿದಾರರು ವಾಪಾಸು ಪಡೆದರು. ಇತರ ಎಲ್ಲಾ ವಿಷಯಗಳಿಗಿಂತ ನಮಗೆಲ್ಲಾ ಕಲೈನಾರ್ ಬಹಳ ಮುಖ್ಯ. ಈಗ ಸರ್ಕಾರದ ಮುಂದೆ ಯಾವುದೇ ಕಾನೂನಾತ್ಮಕ ಅಡಚಣೆಗಳಿಲ್ಲ, ಎಂದು ಅರ್ಜಿ ವಾಪಾಸು ಪಡೆದ ಹಿರಿಯ ವಕೀಲ ದೊರೆಸ್ವಾಮಿ ಈ ಸಂದರ್ಭದಲ್ಲಿ ಹೇಳಿದರು.
ಆದರೆ ಮರೀನಾ ಬೀಚ್ನಲ್ಲಿ ಅಂತ್ಯಸಂಸ್ಕಾರಕ್ಕೆ ಅವಕಾಶ ನಿರಾಕರಿಸಿದ್ದು, ತಮಿಳುನಾಡು ಸರಕಾರ ಕರುಣಾನಿಧಿ ಸಾವಿನಲ್ಲೂ ರಾಜಕಾರಣ ಮಾಡುತ್ತಿದೆ ಎಂದು ಡಿಎಂಕೆ ಆರೋಪಿಸಿತ್ತು. ಈ ನಡುವೆ ಆರೆಸ್ಸೆಸ್ ಕೂಡಾ ಡಿಎಂಕೆಯ ನಡೆಯನ್ನು ವಿರೋಧಿಸಿತ್ತು. ಮರೀನಾ ಬೀಚ್ನಲ್ಲಿ ಕಲೈನಾರ್ ಅಂತ್ಯಸಂಸ್ಕಾರಕ್ಕೆ ಅವಕಾಶ ನೀಡಬಾರದೆಂದು ಅದು ಆಗ್ರಹಿಸಿತ್ತು.
ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಹಾಗೂ ದ್ರಾವಿಡ ಮುನ್ನೇತ್ರ ಕಳಗಂ (DMK) ಪಕ್ಷದ ಪರಮೋಚ್ಛ ನೇತಾರ ಮುತ್ತುವೇಲ್ ಕರುಣಾನಿಧಿ ಮಂಗಳವಾರ ಸಾಯಂಕಾಲ ಚೆನ್ನೈನಲ್ಲಿರುವ ಕಾವೇರಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.