ಬಿಎಸ್'ವೈ ವಿರುದ್ಧ ತನಿಖೆ: ಸದನಕ್ಕೆ ತಿಳಿಸಿದ್ದ ಡಿವಿಎಸ್

Published : Aug 29, 2017, 03:50 PM ISTUpdated : Apr 11, 2018, 12:52 PM IST
ಬಿಎಸ್'ವೈ ವಿರುದ್ಧ ತನಿಖೆ: ಸದನಕ್ಕೆ ತಿಳಿಸಿದ್ದ ಡಿವಿಎಸ್

ಸಾರಾಂಶ

ನಗರದ ಡಾ.ಕೆ. ಶಿವರಾಮ ಕಾರಂತ ಬಡಾವಣೆಯಲ್ಲಿ ಬಿಡಿಎ ಸ್ವಾಧೀನಪಡಿಸಿಕೊಂಡಿದ್ದ ಜಮೀನು ಡಿ-ನೋಟಿಫಿಕೇಷನ್ ಮಾಡಲು 2010ರಲ್ಲಿ ಮುಖ್ಯಮಂತ್ರಿಯಾಗಿದ್ದ ಬಿ. ಎಸ್.ಯಡಿಯೂರಪ್ಪ ‘ಭೂ ಮಾಲೀಕರಿಂದ ಅರ್ಜಿಗಳನ್ನು ನೇರವಾಗಿ ಸ್ವೀಕರಿಸಿ, ಆದೇಶಗಳನ್ನು ಹೊರಡಿಸಿದ್ದರು.

ಬೆಂಗಳೂರು(ಆ.29): ನಗರದ ಡಾ.ಕೆ. ಶಿವರಾಮ ಕಾರಂತ ಬಡಾವಣೆಯಲ್ಲಿ ಬಿಡಿಎ ಸ್ವಾಧೀನಪಡಿಸಿಕೊಂಡಿದ್ದ ಜಮೀನು ಡಿ-ನೋಟಿಫಿಕೇಷನ್ ಮಾಡಲು 2010ರಲ್ಲಿ ಮುಖ್ಯಮಂತ್ರಿಯಾಗಿದ್ದ ಬಿ. ಎಸ್.ಯಡಿಯೂರಪ್ಪ ‘ಭೂ ಮಾಲೀಕರಿಂದ ಅರ್ಜಿಗಳನ್ನು ನೇರವಾಗಿ ಸ್ವೀಕರಿಸಿ, ಆದೇಶಗಳನ್ನು ಹೊರಡಿಸಿದ್ದರು.

ನಂತರ ಮುಖ್ಯಮಂತ್ರಿಯಾದ ಡಿ.ವಿ. ಸದಾನಂದ ಗೌಡ ಅವರು 2012ರಲ್ಲಿ ವಿಧಾನಮಂಡಲದ ಅಧಿವೇಶನದ ವೇಳೆ ಶಿವರಾಮ ಕಾರಂತ ಬಡಾವಣೆ ಜಮೀನು ಡಿನೋಫಿಕೇಷನ್ ಕುರಿತು ಸಿಐಡಿ ತನಿಖೆ ನಡೆಸಲು ಆದೇಶಿಸುವುದಾಗಿ ಸದನಕ್ಕೆ ಭರವಸೆ ನೀಡಿದ್ದರು ಎಂದು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಹೈಕೋರ್ಟ್ ಗಮನಕ್ಕೆ ತಂದಿದೆ.

ಕಾರಂತ ಬಡಾವಣೆ ಡಿ-ನೋಟಿಫಿಕೇಷನ್ ಪ್ರಕರಣ ಸಂಬಂಧ ತಮ್ಮ ವಿರುದ್ಧ ಎಸಿಬಿ ದಾಖಲಿಸಿರುವ ಎರಡು ಎಫ್'ಐಆರ್‌ಗಳ ರದ್ದು ಕೋರಿ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಗಳ ಕುರಿತು ಸೋಮವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ಏಕಸದಸ್ಯ ಪೀಠಕ್ಕೆ ಎಸಿಬಿ ಪರ ಹಿರಿಯ ವಕೀಲ ಪ್ರೊ.ರವಿವರ್ಮ ಕುಮಾರ್ ಹೀಗೆ ತಿಳಿಸಿದರು. ಈ ವಾದ ಆಲಿಸಿದ ನ್ಯಾಯಪೀಠವು ಆ.೩೦ಕ್ಕೆ ಅರ್ಜಿ ವಿಚಾರಣೆ ಮುಂದೂಡಿತು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಿಪೇರಿಗೆ 5 ಗಂಟೆ ಬೇಕೆಂದ ರೈಲ್ವೆ ಅಧಿಕಾರಿಗಳು; ಸುತ್ತಿಗೆಯಿಂದ 10 ನಿಮಿಷದಲ್ಲಿ ಸರಿ ಮಾಡಿದ ಅಂಕಲ್
ಅಂಕಣ | ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಉದ್ಯೋಗದ ನವಯುಗ!