
ನವದೆಹಲಿ(ಅ.27): ಆಧಾರ್ ಕಾರ್ಡ್ ಇಲ್ಲದ ಕಾರಣಕ್ಕೆ ಅಥವಾ ಪಡಿತರ ಕಾರ್ಡ್'ನೊಂದಿಗೆ ಆಧಾರ್ ಜೋಡಿಸದ್ದಕ್ಕೆ ಪಡಿತರವನ್ನು ನಿರಾಕರಿಸಬಾರದು ಎಂದು ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ.
ಅಲ್ಲದೇ ಆಧಾರ್ ಹೊಂದದೇ ಇರುವ ಕಾರಣಕ್ಕೆ ಫಲಾನುಭವಿ ಕುಟುಂಬಗಳನ್ನು ಪಟ್ಟಿಯಿಂದ ತೆಗೆದುಹಾಕಬಾರದು ಎಂದು ತಿಳಿಸಿದೆ. ಈ ಸಂಬಂಧ ಎಲ್ಲಾ ರಾಜ್ಯಗಳಿಗೆ ಆಹಾರ ಸಚಿವಾಲಯ ಸುತ್ತೋಲೆ ಹೊರಡಿಸಲಾಗಿದೆ.
ಸಾರ್ವಜನಿಕ ಪಡಿತರ ನಿರಾಕರಿಸಿದ್ದರಿಂದ ಜಾರ್ಖಂಡ್'ನಲ್ಲಿ ಇತ್ತೀಚೆಗೆ 11 ವರ್ಷದ ಬಾಲಕಿಯೊಬ್ಬಳು ಹಸಿವಿನಿಂದ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.