
ನವದೆಹಲಿ (ಅ.1); ಕಾವೇರಿ ತೀರ್ಪಿಗೆ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಪ್ರತಿಕ್ರಿಯೆ ನೀಡಿದ್ದು ಸುಪ್ರೀಂಕೋರ್ಟ್ ಮೇಲೆ ಪಕ್ಷಪಾತದ ಟೀಕೆ ಬೇಡ. ಕಾನೂನು ತಂತ್ರ ರೂಪಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಹೇಳಿದ್ದಾರೆ.
ಕಾವೇರಿ ಕೊಳ್ಳದಲ್ಲಿ ಸ್ಥಿತಿಗತಿ ಪರಿಶೀಲಿಸಿ ತಜ್ಞರು ವರದಿಯನ್ನು ನೀಡಬೇಕು. ಸಂಕಷ್ಟ ಸ್ಥಿತಿಯಲ್ಲೂ ತಮಿಳುನಾಡಿಗೆ ಹೆಚ್ಚುವರಿ ನೀರು ಬಿಟ್ಟಿದ್ದೇವೆ ಎಂದು ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ.
ನಮ್ಮ ವಕೀಲರು ನ್ಯಾಯಾಲಯದಲ್ಲಿ ವಾದವನ್ನೇ ಮಾಡಿಲ್ಲ. ವಕೀಲರ ತಂಡದ ಈ ವರ್ತನೆಯೇ ನಮ್ಮ ವೈಫಕ್ಕೆ ಕಾರಣ. ಸರ್ಕಾರ ಪದೇ ಪದೇ ಕಾನೂನು ತಂತ್ರ ರೂಪಿಸುವಲ್ಲಿ ಎಡವುತ್ತಿದೆ ಎಂದು ರಾಜೀವ್ ಚಂದ್ರಶೇಖರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.