ಪೇಜಾವರ ಶ್ರೀ ಸಲಹೆ ಬೇಡ: ನಿಜಗುಣಾನಂದ

Published : Oct 20, 2017, 12:26 PM ISTUpdated : Apr 11, 2018, 12:46 PM IST
ಪೇಜಾವರ ಶ್ರೀ ಸಲಹೆ ಬೇಡ: ನಿಜಗುಣಾನಂದ

ಸಾರಾಂಶ

ಸ್ವತಂತ್ರ ಲಿಂಗಾಯತ ಧರ್ಮಕ್ಕಾಗಿ ನಡೆಯುತ್ತಿರುವ ಹೋರಾಟದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದ ಪೇಜಾವರ ಶ್ರೀಗಳ ಹೇಳಿಕೆಗೆ ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿ ವಿರೋಧ ವ್ಯಕ್ತಪಡಿಸಿದ್ದಾರೆ

ಧಾರವಾಡ: ಸ್ವತಂತ್ರ ಲಿಂಗಾಯತ ಧರ್ಮಕ್ಕಾಗಿ ನಡೆಯುತ್ತಿರುವ ಹೋರಾಟದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದ ಪೇಜಾವರ ಶ್ರೀಗಳ ಹೇಳಿಕೆಗೆ ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿ ವಿರೋಧ ವ್ಯಕ್ತಪಡಿಸಿದ್ದು, ಮೂರು ಸಾವಿರ ವಿರಕ್ತ ಮಠಾಧೀಶರು ಹಾಗೂ ಮೂರೂವರೆ ಕೋಟಿ ಲಿಂಗಾಯತ ಸಮುದಾಯ ಹೊಂದಿರುವ ತಮಗೆ ಧರ್ಮದ ಹೋರಾಟದಲ್ಲಿ ಪೇಜಾವರ ಶ್ರೀಗಳ ಮಾರ್ಗದರ್ಶನ ಬೇಡ ಎಂದಿದ್ದಾರೆ.

ನಮ್ಮನ್ನು ಬಿಟ್ಟು ಬೇರೆ ಹೋಗಬೇಡಿ, ಲಿಂಗಾಯತ ವೀರಶೈವರು ಹಿಂದೂಗಳು ಎಂದು ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಪೇಜಾವರ ಶ್ರೀಗಳು ವಿರೋಧ ವ್ಯಕ್ತಪಡಿಸಿದ್ದರು.

ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ಬಗ್ಗೆ ಮಾತನಾಡಿದ್ದ ಅವರು, ಅವರ ಆಂತರಿಕ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಹೊರಗಿನವನಾಗಿ ಸಲಹೆ ನೀಡುತ್ತಿದ್ದೇನೆ. ನಮ್ಮನ್ನು ಬಿಟ್ಟು ಬೇರೆ ಹೋಗಬೇಡಿ, ಸಹೋದರರಂತೆ ಬಾಳೋಣ.  ಲಿಂಗಾಯತರು ಹಿಂದೂಗಳಲ್ಲ ಎಂದರೆ, ಇನ್ಯಾರು ಹಿಂದೂಗಳು.. ಎಂದು ಲಿಂಗಾಯತ ಪ್ರತ್ಯೇಕ ಧರ್ಮವಾದಿಗಳಿಗೆ ಪೇಜಾವರ ಶ್ರೀಗಳ ಪ್ರಶ್ನಿಸಿದ್ದರು.

ಒಂದಾಗಿದ್ದರೆ ಲಿಂಗಾಯತ ಸಮಾಜಕ್ಕೆ ಬಲ. ಬ್ರಾಹ್ಮಣರಿಂದ, ಮಾಧ್ವರಿಂದ ಬಸವಣ್ಣಗೆ ಅನ್ಯಾಯ ಆಗಿಲ್ಲ. ಪ್ರೇಮದ ಸಲಹೆ, ನಮ್ಮನ್ನು ಬಿಟ್ಟು ಹೋಗಬೇಡಿ ಎಂದು ಮನವಿ ಮಾಡಿದ್ದರು.

.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮತಾಂತರವಾದ ವ್ಯಕ್ತಿ ಸಮಾಧಿ ವಿಚಾರಕ್ಕೆ ಗಲಾಟೆ: ಮತಾಂತರಿಗಳ ಬೆನ್ನಟ್ಟಿ ಚರ್ಚ್‌ಗೆ ಬೆಂಕಿ ಹಚ್ಚಿದ ಬುಡಕಟ್ಟು ಜನ
ಟೇಕಾಫ್‌ ಆದ ಕೆಲವೇ ಕ್ಷಣದಲ್ಲಿ ರನ್‌ವೇಗೆ ಬಿದ್ದು ಪತನವಾದ ವಿಮಾನ, ಎಲ್ಲಾ ಪ್ರಯಾಣಿಕರ ಸಾವು!