ಜಮೀರ್‌ ಏನೆಂದು ಗೊತ್ತಿದೆ, ಅವರ ಸಹವಾಸವೇ ಬೇಡ: ಎಚ್'ಡಿಕೆ

Published : Apr 10, 2017, 07:34 AM ISTUpdated : Apr 11, 2018, 12:56 PM IST
ಜಮೀರ್‌ ಏನೆಂದು ಗೊತ್ತಿದೆ, ಅವರ ಸಹವಾಸವೇ ಬೇಡ: ಎಚ್'ಡಿಕೆ

ಸಾರಾಂಶ

ಜೆಡಿಎಸ್‌ನಿಂದ ಅಮಾನತಾದ ಶಾಸಕರು ಮರಳಿ ಪಕ್ಷಕ್ಕೆ ಸೇರ್ಪಡೆಗೊಳ್ಳಲು ಆಸಕ್ತಿ ವ್ಯಕ್ತಪಡಿಸಿದ್ದಾರೆ. ಕಾರ್ಯಕರ್ತರಂತೆ ಕೆಲಸ ಮಾಡುವ ಇಚ್ಛೆ ಹೊಂದಿದ್ದವರಿಗೆ ಮುಕ್ತ ಆಹ್ವಾನವಿದೆ. ಜೆಡಿಎಸ್‌ ಶಾಸಕ ಜಮೀರ್‌ ಅಹ್ಮದ್‌ ದಿನಕ್ಕೊಂದು, ಗಳಿಗೆಗೊಂದು ಹೇಳಿಕೆ ನೀಡುತ್ತಿದ್ದು, ಅವರ ಮೇಲೆ ಭರವಸೆ ಇಡುವುದು ಹೇಗೆ? ದೇವೇಗೌಡ ಜೆಡಿಎಸ್‌ ರಾಷ್ಟ್ರಾಧ್ಯಕ್ಷ

ಬೆಂಗಳೂರು: ಪಕ್ಷದ ಬಂಡಾಯ ಶಾಸಕ ಜಮೀರ್‌ ಅಹಮದ್‌ ಅವರ ಸಹವಾಸವೇ ನಮಗೆ ಬೇಡ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಖಡಕ್‌ ಆಗಿ ಹೇಳಿದ್ದಾರೆ.

ಭಾನುವಾರ ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ನಮ್ಮೊಂದಿಗೆ ಜಮೀರ್‌ ಅಹಮದ್‌ ಮಾತುಕತೆಗೆ ಬರುವುದು ಬೇಡ. ಅವರನ್ನು ನಾವು ಕರೆಯುವುದೂ ಬೇಕಿಲ್ಲ. ಅವರ ಸಹವಾಸವೇ ನಮಗೆ ಬೇಡ. ಜಮೀರ್‌ ಯಾರು ಎಂಬುದು ಜನತೆಗೆ ಗೊತ್ತಿದೆ ಎಂದು ತೀಕ್ಷ್ಣವಾಗಿ ತಿಳಿಸಿದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಚನ್ನಪಟ್ಟಣ ಕ್ಷೇತ್ರದಿಂದ ಈ ಹಿಂದೆ ಅನಿತಾ ಕುಮಾರಸ್ವಾಮಿ ಸ್ಪರ್ಧಿಸಿದ್ದರು. ಮುಂದಿನ ಚುನಾವಣೆಯಲ್ಲಿಯೂ ಅವರು ಆ ಕ್ಷೇತ್ರದಿಂದಲೇ ಸ್ಪರ್ಧಿಸಬೇಕು ಎಂಬುದು ಜನರ ಆಶಯ. ಈ ಬಗ್ಗೆ ಸದ್ಯಕ್ಕೆ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದರು. ಇದೇ ವೇಳೆ, ನಾಗಮಂಗಲಕ್ಕೆ ಅಭ್ಯರ್ಥಿ ಅಂತಿಮವಾಗಿಲ್ಲ ಎಂದೂ ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೋಲ್ಡ್ ಬಾಂಡ್ ಹೂಡಿಕೆದಾರರಿಗೆ ಶೇ.366ರಷ್ಟು ರಿಟರ್ನ್ಸ್, 2 ಲಕ್ಷ ರೂ.ಗೆ 9.32 ಲಕ್ಷ ರೂ ಬಂಪರ್
ರೇ*ಪ್ ಆರೋಪಿ ಜೊತೆ ಸೇರಿಕೊಂಡು ವ್ಯಕ್ತಿ ವಿರುದ್ಧ ಸುಳ್ಳು ರೇ*ಪ್‌ ಕೇಸ್ ಹಾಕಿದ ಮಹಿಳೆ ಬಂಧನ