‘ಸಿದ್ಧಗಂಗಾ ಶ್ರೀ ಹೆಸರಿನಲ್ಲಿ ರಾಜಕೀಯ ಬೇಡ’

Published : Sep 16, 2017, 05:11 PM ISTUpdated : Apr 11, 2018, 12:46 PM IST
‘ಸಿದ್ಧಗಂಗಾ ಶ್ರೀ ಹೆಸರಿನಲ್ಲಿ ರಾಜಕೀಯ ಬೇಡ’

ಸಾರಾಂಶ

ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರದಲ್ಲಿ ತುಮಕೂರಿನ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳ ಹೆಸರಿನಲ್ಲಿ ಕೆಲವರು ರಾಜಕೀಯ ಮಾಡುತ್ತಿದ್ದಾರೆ. ಶ್ರೀಗಳ ಹೆಸರು ರಾಜಕೀಯಕ್ಕೆ ಬಳಕೆ ಮಾಡುವುದು ಸರಿಯಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದರು.

ಯಾದಗಿರಿ/ಬೆಂಗಳೂರು: ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರದಲ್ಲಿ ತುಮಕೂರಿನ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳ ಹೆಸರಿನಲ್ಲಿ ಕೆಲವರು ರಾಜಕೀಯ ಮಾಡುತ್ತಿದ್ದಾರೆ. ಶ್ರೀಗಳ ಹೆಸರು ರಾಜಕೀಯಕ್ಕೆ ಬಳಕೆ ಮಾಡುವುದು ಸರಿಯಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದರು.

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಭೀಮರಾಯನಗುಡಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಿಂಗಾಯತ ಸಮುದಾಯದಲ್ಲಿ ಅನೇಕ ರಾಜಕಾರಣಿಗಳು, ಮುಖಂಡರಿದ್ದಾರೆ. ಲಿಂಗಾಯತ ಧರ್ಮದ ವಿಚಾರವನ್ನು ಅವರೇ ಬಗೆಹರಿಸಿ ಕೊಳ್ಳಬೇಕು. ಈ ವಿಷಯದಲ್ಲಿ ನಾನು ಮಧ್ಯ ಪ್ರವೇಶಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಲಿಂಗಾಯತ ವಿವಾದ ಅಂತ್ಯ: ಶರಣ ಪ್ರಕಾಶ್

ಪ್ರತ್ಯೇಕ ಧರ್ಮ ರಚನೆ ಸಂಬಂಧದ ಗೊಂದಲ ನಿವಾರಣೆಗೆ ತಜ್ಞರ ಸಮಿತಿ ರಚನೆಗೆ ನಿರ್ಧರಿಸಲಾಗಿದ್ದು, ವೀರಶೈವ-ಲಿಂಗಾಯತ ವಿವಾದ ಈಗ ಮುಗಿದ ಅಧ್ಯಾಯ ಎಂದು ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ತಿಳಿಸಿದರು. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ವೀರಶೈವ- ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರಕ್ಕೆ ಸಂಬಂಧಪಟ್ಟಂತೆ ಸ್ವತಂತ್ರ ಧರ್ಮವಾಗಬೇಕು ಎಂಬ ಬಗ್ಗೆ ಸ್ಪಷ್ಟತೆ ಇದೆ. ಆದರೆ ಯಾವ ಹೆಸರಿನಲ್ಲಿ ಧರ್ಮವಾಗಬೇಕು ಎಂಬ ಬಗ್ಗೆ ಸಮಿತಿಯ ನಿರ್ಣಯದಂತೆ ಮುಂದುವರಿಯಲಾಗುವುದು ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೆನಡಾ, ವೆನಿಜುವೆಲಾ, ಗ್ರೀನ್‌ ಲ್ಯಾಂಡ್‌ ಒಳಗೊಂಡ ಅಮೆರಿಕ ಮ್ಯಾಪ್‌ ಬಿಡುಗಡೆ
ಜಗತ್ತಿನ ಅತ್ಯಂತ ಮೌಲ್ಯಯುತ ಐಟಿ ಕಂಪನೀಲಿ ಟಿಸಿಎಸ್‌, ಇನ್ಫಿ