ಸಂವಿಧಾನ ಮುಟ್ಟಿದರೆ ಕ್ರಾಂತಿ: ಪರಂ ಎಚ್ಚರಿಕೆ

Published : Dec 01, 2017, 11:42 AM ISTUpdated : Apr 11, 2018, 12:35 PM IST
ಸಂವಿಧಾನ ಮುಟ್ಟಿದರೆ ಕ್ರಾಂತಿ: ಪರಂ ಎಚ್ಚರಿಕೆ

ಸಾರಾಂಶ

ಅಂಬೇಡ್ಕರ್ ರಚಿಸಿರುವ ಸಂವಿಧಾನವನ್ನು ಬಿಜೆಪಿಯವರು ಬದಲಾಯಿಸಲು ಮುಂದಾದರೆ ದೊಡ್ಡಕ್ರಾಂತಿಯೇ ಆಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.

ಮೈಸೂರು: ಅಂಬೇಡ್ಕರ್ ರಚಿಸಿರುವ ಸಂವಿಧಾನವನ್ನು ಬಿಜೆಪಿಯವರು ಬದಲಾಯಿಸಲು ಮುಂದಾದರೆ ದೊಡ್ಡಕ್ರಾಂತಿಯೇ ಆಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.

ಸಂವಿಧಾನದಲ್ಲಿ ಜಾತ್ಯತೀತ ಆಶಯಗಳಿಗೆ ಮಹತ್ವ ನೀಡಲಾಗಿದೆ. ಎಲ್ಲರಿಗೂ ಸಮಾನತೆ ಕಲ್ಪಿಸಿರುವ ಸಂವಿಧಾನ ಬದಲಾವಣೆ ಅಸಾಧ್ಯದ ಮಾತು. ಹಾಗೊಂದು ವೇಳೆ ಬದಲಾಯಿಸಿದರೆ ಕಾಂಗ್ರೆಸ್ ಕೈಕಟ್ಟಿ ಕೂರುವುದಿಲ್ಲ. ಶೋಷಣೆ ಯನ್ನು ನಾವು ಸಹಿಸುವುದಿಲ್ಲ. ಅನಾದಿ ಕಾಲದಿಂದಲೂ ಶೋಷಿತರು, ಅಲ್ಪಸಂಖ್ಯಾತರಿಗೆ ಶಿಕ್ಷಣವನ್ನು ವಂಚಿಸಲಾಯಿತು. ಇದನ್ನು ಅರ್ಥ ಮಾಡಿಕೊಂಡು ಅಲ್ಪಸಂಖ್ಯಾತರು ಬಿಜೆಪಿಗೆ ಯಾವುದೇ ಕಾರಣಕ್ಕೂ ಮತ ನೀಡಬಾರದು ಎಂದು ಮನವಿ ಮಾಡಿದರು.

ಭಾರತ ಉಳಿಯಲು ಕಾಂಗ್ರೆಸ್ ಪಕ್ಷ ತ್ಯಾಗ, ಬಲಿದಾನ ಮಾಡಿದೆ. ಒಂದು ವೇಳೆ 1947ರಲ್ಲಿ ಬಿಜೆಪಿ ಅಧಿಕಾರದಲ್ಲಿದ್ದರೆ ಭಾರತ ದೇಶ ಏನಾಗುತ್ತಿತ್ತು ಎಂಬುದನ್ನು ಅಲ್ಪಸಂಖ್ಯಾತರು ಗಂಭೀರವಾಗಿ ಆಲೋಚಿಸಬೇಕು ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪಿಯುಸಿ ಸರ್ಟಿಫಿಕೇಟ್ ಇದ್ದರೆ ಮಾತ್ರ ವಾಹನಕ್ಕೆ ಪೆಟ್ರೋಲ್ -ಡೀಸೆಲ್, ಡಿ.18ರಿಂದ ಹೊಸ ನಿಯಮ
ಕಿಡ್ನಾಪ್ ಮಾಡಿದವರ ಸ್ಮಾರ್ಟ್‌ವಾಚ್ ಬಳಸಿ ಬಚಾವ್ ಆದ ಹೊಟೆಲ್ ಮ್ಯಾನೇಜರ್, ಕೈಹಿಡಿದ SOS