ಟಿವಿ ಬಿಡಲೊಪ್ಪದ ಸಿಧುಗೆ ಖಾತೆ ಬದಲು ಸಂಚಕಾರ?

Published : Mar 22, 2017, 05:05 PM ISTUpdated : Apr 11, 2018, 12:51 PM IST
ಟಿವಿ ಬಿಡಲೊಪ್ಪದ ಸಿಧುಗೆ ಖಾತೆ ಬದಲು ಸಂಚಕಾರ?

ಸಾರಾಂಶ

ಸಿಧು ಟಿವಿ ಶೋಗಳಲ್ಲಿ ಭಾಗವಹಿಸುವುದು ಲಾಭದಾಯಕ ಹುದ್ದೆ ನಿಯಮಗಳನ್ನು ಉಲ್ಲಂಘಿಸುವುದರಿಂದ, ಅದರಿಂದ ಅವರು ದೂರ ಉಳಿಯುವುದು ಒಳ್ಳೆಯದು ಎಂದು ಮೂಲಗಳು ತಿಳಿಸಿವೆ.

ಚಂಡೀಗಡ(ಮಾ.22): ಸಚಿವರಾದರೂ, ಟೀವಿ ಶೋಗಳಲ್ಲಿ ಭಾಗವಹಿಸುವುದನ್ನು ಬಿಡಲೊಪ್ಪದ ಕಾಂಗ್ರೆಸ್ ನಾಯಕ ನವಜೋತ್‌ಸಿಂಗ್ ಸಿಧು, ಇದೀಗ ತಮ್ಮ ಖಾತೆಗೆ ಸಂಚಕಾರ ತಂದುಕೊಳ್ಳುವ ಸಾಧ್ಯತೆ ಇದೆ.

ಸಿಧು ತಮ್ಮ ನಟನಾ ಚಟುವಟಿಕೆ ಮುಂದುವರಿಸುವುದಾದಲ್ಲಿ, ಅವರ ಸಚಿವ ಖಾತೆ ಬದಲಾಯಿಸಬೇಕಾಗಬಹುದು ಎಂದು ಪಂಜಾಬ್ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ಹೇಳಿದ್ದಾರೆ.

ಪ್ರಸ್ತುತ ಸಿಧುಗೆ ಸ್ಥಳೀಯಾಡಳಿತ, ವಸ್ತು ಸಂಗ್ರಹಾಲಯ ಮತ್ತು ಪ್ರವಾಸೋದ್ಯಮ, ಸಾಂಸ್ಕೃತಿಕ ವ್ಯವಹಾರ ಸಚಿವಾಲಯದ ಜವಾಬ್ದಾರಿ ನೀಡಲಾಗಿದೆ.

ಇದೇ ವೇಳೆ ‘ಪಂಜಾಬ್‌ನ ಮಾಜಿ ಡಿಸಿಎಂ ಸುಖ್‌ಬೀರ್ ಬಾದಲ್ ರೀತಿ ನಾನು ಸಾರಿಗೆ ಉದ್ಯಮಿಯಲ್ಲ. ಹಣ ಸಂಪಾದಿಸಲು ನಾನು ಭ್ರಷ್ಟನಾಗಲು ಸಾಧ್ಯವಿಲ್ಲ. ನನ್ನನ್ನು ಆಯ್ಕೆ ಮಾಡಿದ ಜನತೆಗೆ ನಾನು ವಂಚಿಸಲು ಸಾಧ್ಯವಿಲ್ಲ. ನನ್ನ ಕುಟುಂಬ ನಿರ್ವಹಿಸಲು ನಾನು ಟಿವಿ ಶೋಗಳಲ್ಲಿ ಭಾಗವಹಿಸುತ್ತೇನೆ’’ ಎಂದು ಸಿಧು ಹೇಳಿದ್ದಾರೆ.

ಇನ್ನೊಂದೆಡೆ, ಸಿಧು ಟಿವಿ ಶೋಗಳಲ್ಲಿ ಭಾಗವಹಿಸುವುದು ಲಾಭದಾಯಕ ಹುದ್ದೆ ನಿಯಮಗಳನ್ನು ಉಲ್ಲಂಘಿಸುವುದರಿಂದ, ಅದರಿಂದ ಅವರು ದೂರ ಉಳಿಯುವುದು ಒಳ್ಳೆಯದು ಎಂದು ಮೂಲಗಳು ತಿಳಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯುವ ನಿಧಿ ಯೋಜನೆ: 3.62 ಲಕ್ಷ ನಿರುದ್ಯೋಗಿಗಳ ನೋಂದಣಿ, 2,326 ಮಂದಿಗೆ ಸಿಕ್ಕಿದೆ ಕೆಲಸ!
ಇನ್ನೆರಡು ವರ್ಷದಲ್ಲಿ 175 ಕಿ.ಮೀ ಮೆಟ್ರೋ ಸೇವೆ ಜನರಿಗೆ ಲಭ್ಯ : ಡಿ.ಕೆ.ಶಿವಕುಮಾರ್