
ಮೈಸೂರು : ಸಿಎಂ ಪುತ್ರ ಯತೀಂದ್ರ ಅವರು ಇದೀಗ ಚುನಾವಣಾ ಕಣಕ್ಕೆ ಇಳಿಯಲು ಸಿದ್ಧರಾಗಿದ್ದಾರೆ. ವರುಣಾ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಸಿದ್ಧವಾಗಿದ್ದು, ಅವರಿಗೆ ಡಾಕ್ಟರ್ ಗಳ ಬೆಂಬಲ ಸಿಗುತ್ತಿದೆ.
ಡಾ ಯತೀಂದ್ರ ಕಣಕ್ಕಿಳಿದರೆ ನಮ್ಮ ಬೆಂಬಲ ಕೊಟ್ಟೇ ಕೊಡುತ್ತೇವೆ ಎಂದು ಯತೀಂದ್ರಂಗೆ ಬಹಿರಂಗ ಬೆಂಬಲವನ್ನು ಭಾರತೀಯ ವೈದ್ಯಕೀಯ ಸಂಘ-ಭಾರತೀಯ ವೈದ್ಯಕೀಯ ಸಂಘ ಘೋಷಿಸಿದೆ.
ವಿಧಾನಸಭಾ ಎಲೆಕ್ಷನ್ ನಲ್ಲಿ ಕಣಕ್ಕಿಳಿಯುವ ಎಲ್ಲಾ ವೈದ್ಯರಿಗೂ ಪಕ್ಷತೀತಾವಾಗಿ ಬೆಂಬಲ ನೀಡಲು ನಿರ್ಧಾರ ಮಾಡಲಾಗಿದೆ. ಈ ನಿಯಮದಂತೆ ಸಿಎಂ ಮಗನಿಗೂ ಬೆಂಬಲ ನೀಡುವುದಾಗಿ ಹೇಳಿದ್ದಾರೆ.
ಯತೀಂದ್ರ ಪರ ಪ್ರಚಾರಕ್ಕೆ ಹೋಗಲು ಕೂಡ ವೈದ್ಯರು ಸಿದ್ಧರಾಗಿದ್ದಾಗಿ ಭಾರತೀಯ ವೈದ್ಯ ಸಂಘದ ಅಧ್ಯಕ್ಷ ರವೀಂದ್ರ ಹೇಳಿಕೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.