
ಬೆಳಗಾವಿ (ನ.20): ಇಂದು ನಡೆಯುತ್ತಿರುವ ಅಧಿವೇಶನದಲ್ಲಿ ನೈಸ್ ಒಪ್ಪಂದ ರದ್ದುಗೊಳಿಸುವಂತೆ ಕಾನೂನು ಇಲಾಖೆ ಸರ್ಕಾರಕ್ಕೆ ಶಿಫಾರಸು ಮಾಡಿದೆ.
ಬಿಎಂಐಸಿ ಯೋಜನೆಗೆ ಸಂಬಂಧಿಸಿದಂತೆ ಬಹಳಷ್ಟು ಷರತ್ತುಗಳನ್ನು ನೈಸ್ ಉಲ್ಲಂಘಿಸಿದೆ ಎಂಬ ಆರೋಪ ಕೇಳಿ ಬಂದಿದೆ. ಅಗತ್ಯಕ್ಕಿಂತಲೂ ಹೆಚ್ಚಿನ ಭೂಮಿ ಸ್ವಾಧೀನಪಡಿಸಿಕೊಂಡಿದೆ. ಮೂಲಸೌಕರ್ಯ ಅಭಿವೃದ್ಧಿಗಿಂತ ಅನಧಿಕೃತ ಬೆಳವಣಿಗೆಗಳು ಹೆಚ್ಚಾಗಿವೆ. ಕೆಐಎಡಿಬಿಯ ನಿರಾಕ್ಷೇಪಣಾ ಪತ್ರ ಆಧರಿಸಿ ಭೂಸ್ವಾಧೀನದಿಂದ ಕೈಬಿಡಲಾಗಿದೆ. ಇದರಿಂದ ಕೆಲವು ಪ್ರಭಾವಿಗಳು ವ್ಯಾಪಕ ವಿಸ್ತೀರ್ಣದ ಜಮೀನನ್ನು ಬೇನಾಮಿಯಾಗಿ ಹೊಂದಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ನೈಸ್ ಅಕ್ರಮ ಕುರಿತು ಸದನ ಸಮಿತಿ ನೀಡಿದ್ದ 392 ಪುಟಗಳ ಬೃಹತ್ ವರದಿಯನ್ನು ಕಾನೂನು ಸಚಿವ ಜಯಚಂದ್ರ ಮಂಡಿಸಿದ್ದರು. ಈ ಅಕ್ರಮಗಳ ಕುರಿತು ಸಿಬಿಐ- ಜಾರಿ ನಿರ್ದೇಶನಾಲಯದಿಂದ ತನಿಖೆ ನಡೆಸಲಾಗಿತ್ತು. ವರದಿ ಇನ್ನೂ ಲೋಕೋಪಯೋಗಿ ಇಲಾಖೆಯಲ್ಲಿ ಧೂಳು ಹಿಡಿಯುತ್ತಿದೆ. ವರ್ಷ ಕಳೆದರೂ ದಾಖಲೆ ಎ.ಜಿ ಕಚೇರಿ ತಲುಪಿಲ್ಲ. ಲೋಕೋಪಯೋಗಿ ಇಲಾಖೆ ಗೊಂದಲದಲ್ಲಿದೆ. ನೈಸ್ ಒಪ್ಪಂದ ರದ್ದು ಕುರಿತು ವಿಧಾನಸಭೆಯಲ್ಲಿಂದು ಚರ್ಚೆ ನಡೆಯಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.