ಕೊಡಗು (ಆ. 21): ಜನರಿಗೆ ಬಿಸ್ಕೆಟ್ ನೀಡಿ ಸಾಂತ್ವನ ಹೇಳುವ ಬದಲು ಅದನ್ನು ಎಸೆದು ಹೋಗಿದ್ದಾರೆ ಎಂದು ತಮ್ಮ ವಿರುದ್ಧ ಕೇಳಿ ಬಂದಿರುವ ಟೀಕೆಗೆ ರೇವಣ್ಣ ಉತ್ತರಿಸಿದ್ದಾರೆ. ‘ನಾನು ವಾಸ್ತು ಪ್ರಕಾರ ಸರಿಯಾದ ಜಾಗದಲ್ಲಿ ನಿಂತು ಜನರಿಗೆ ಬಿಸ್ಕೆಟ್ ನೀಡಿದ್ದೇನೆ. ಆಗ್ನೇಯ ಮೂಲೆಯಲ್ಲಿ ನಿಂತು ಪರಿಹಾರ ನೀಡಿದರೆ ಒಳ್ಳೆಯದಾಗಲಿದೆ ಎಂದು ಜ್ಯೋತಿಷಿಗಳು ಹೇಳಿದ್ದರು.
ಅದರಂತೆ ನಾನು ನಡೆದುಕೊಂಡಿದ್ದೇನೆ. ಜಾಗದಿಂದ ಕದಲಿದರೆ ವಾಸ್ತುವಿಗೆ ಅಪಚಾರ ಆಗುತ್ತಿತ್ತು. ಅಲ್ಲದೇ ರಾಹುಕಾಲಕ್ಕೂ ಮುನ್ನ ಬಿಸ್ಕೆಟ್ ಹಂಚಬೇಕಾಗಿತ್ತು. ಹೀಗಾಗಿ ಗಡಿಬಿಡಿಯಲ್ಲಿ ಅದನ್ನು ನೀಡಬೇಕಾಗಿ ಬಂತು. ಆದರೆ, ಅದನ್ನೇ ಎಲ್ಲರೂ ತಪ್ಪಾಗಿ ಭಾವಿಸಿದ್ದಾರೆ. ಇದರಲ್ಲಿ ನನ್ನ ತಪ್ಪೇನೂ ಇಲ್ಲ’ ಎಂದು ರೇವಣ್ಣ ಅವರು ಸುಳ್ಸುದ್ದಿಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.
ಪ್ರಾಣಿಗಳಿಗೆ ಎಸೆಯೋ ರೀತಿ ಸಂತ್ರಸ್ತರಿಗೆ ಬಿಸ್ಕೆಟ್ ಎಸೆದು ಅವಮಾನಿಸಿದ ಸಚಿವ ರೇವಣ್ಣ!
ಸಂತ್ರಸ್ತರಿಗೆ ಅವಮಾನ | #ಕ್ಷಮೆ_ಕೇಳಿ_ರೇವಣ್ಣ: ಜನರಿಂದ ಆಗ್ರಹ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.